– ಆರೋಗ್ಯ ಸುಧಾರಣೆ ಆಗುವವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ
ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡರು (HD Devegowda) ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಮೂರು ನಾಲ್ಕು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ತಿಳಿಸಿದರು.
ಬೆಂಗಳೂರಿನಲ್ಲಿ (Bengaluru) ಗುರುವಾರ ತಮ್ಮ ತಂದೆಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಯಾರೂ ಆತಂಕಪಡುವ ಅಗತ್ಯ ಇಲ್ಲ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ಆರೋಗ್ಯ ಸುಧಾರಣೆ ಆಗುವವರೆಗೂ ಆಸ್ಪತ್ರೆಯಲ್ಲೆ ಚಿಕಿತ್ಸೆ
ಸದ್ಯ ಮಣಿಪಾಲ್ ಆಸ್ಪತ್ರೆಗೆ ದೇವೇಗೌಡರನ್ನ ದಾಖಲಿಸಲಾಗಿದ್ದು, ಆರೋಗ್ಯ ಸುಧಾರಣೆ ಆಗುವವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಸಂಪೂರ್ಣವಾಗಿ ಆರೋಗ್ಯ ಚೇತರಿಕೆ ಬಳಿಕ ಡಿಸ್ಸಾರ್ಜ್ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸದ್ಯಕ್ಕೆ ದೇವೇಗೌಡರ ಆರೋಗ್ಯ ಸುಧಾರಣೆ ಆಗಿದ್ದು, ವಾರ್ಡ್ ನಲ್ಲಿ ಇದ್ದಾರೆ. ಇನ್ನೂ 2-3 ದಿನಗಳ ವರೆಗೂ ಆರೋಗ್ಯ ಚೇತರಿಕೆಯತ್ತ ವೈದ್ಯರು ನಿಗಾ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.