ಮಗನಿಗೆ ಶುಭಕೋರಿ ಬಿಜೆಪಿಗೆ ಕುಟುಕಿದ್ರು ಎಚ್‍ಡಿಡಿ

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಇಂದು 58ನೇ ಜನ್ಮ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಪುತ್ರನಿಗೆ ಶುಭಕೋರಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇ ಗೌಡ ಅವರು ಬಿಜೆಪಿಗೆ ಕುಟುಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ, ದೇಶದಲ್ಲಿ ನಮ್ಮನ್ನು ಬಿಟ್ಟರೆ ಮತ್ತೊಬ್ಬರಿಲ್ಲ ಎನ್ನುವವರಿಗೆ ಸ್ಪಷ್ಟ ಸಂದೇಶ ಸಿಕ್ಕಿದೆ ಅಂತ ಹೇಳುವ ಮೂಲಕ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವೀಟ್‍ನಲ್ಲೇ ಕುಟುಕಿದ್ದಾರೆ.

ಟ್ವೀಟ್ ನಲ್ಲೇನಿದೆ?
”ರಾಜ್ಯದ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಜನಪರ ಹಾಗೂ ರೈತಪರವಾಗಿರುವ ಮೈತ್ರಿ ಸರ್ಕಾರವನ್ನು ಮುನ್ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ ಅವರಿಗೆ ದೇವರು ಆಯುಷ್ಯ, ಆರೋಗ್ಯ ಮತ್ತು ಶಕ್ತಿ ನೀಡುವ ಮೂಲಕ ಹೊಸ ಅಭಿವೃದ್ದಿಯ ಪರ್ವ ಕರ್ನಾಟಕ ರಾಜ್ಯದಲ್ಲಿ ಆರಂಭವಾಗಲೆಂದು ಹಾರೈಸುತ್ತೇನೆಂದು” ಬರೆದುಕೊಂಡಿದ್ದಾರೆ.

ಇದೇ ವೇಳೆ ಬಿಜೆಪಿಗೆ ಟಾಂಗ್ ನೀಡಿರುವ ಅವರು, ದೇಶದಲ್ಲಿ ನಮ್ಮನ್ನು ಬಿಟ್ಟರೆ ಮತ್ತೊಬ್ಬರಿಲ್ಲ ಎನ್ನುವವರಿಗೆ ಸ್ಪಷ್ಟ ಸಂದೇಶ ಸಿಕ್ಕಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಸೋಮವಾರ ಪ್ರಮಾಣವಚನ ಸ್ವೀಕರಿಸಲಿರುವ ಅಶೋಕ್ ಗೆಹ್ಲೋಟ್, ಕಮಲ್ ನಾಥ್ ಹಾಗೂ ಯುವನಾಯಕ ಸಚಿನ್ ಪೈಲಟ್ ಅವರಿಗೆ ನನ್ನ ಶುಭಾಶಯಗಳು. ಮುಖ್ಯವಾಗಿ ಸೋಮವಾರ ನಡೆಯಲಿರುವ ಸಮಾರಂಭಗಳು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದಾಗಿದ್ದು, ಮಹಾಮೈತ್ರಿಯ ಮತ್ತೊಂದು ಸಂಕೇತ ಎಂದು ಪೋಸ್ಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *