ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿ – ಯಾರು, ಏನು ಹೇಳಿದ್ರು?

Public TV
1 Min Read

ನವದೆಹಲಿ: ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದು, ಆದರೆ ಈ ಕುರಿತು ರಾಷ್ಟ್ರ ನಾಯಕರು ತಮ್ಮದೇ ಹೇಳಿಕೆ ನೀಡಿದ್ದಾರೆ.

ಜೂನ್ 7ರಂದು ಪ್ರಧಾನ ಕಚೇರಿ ನಾಗ್ಪುರದಲ್ಲಿ ಸ್ವಯಂಸೇವಕರಿಗೆ ನಡೆಸುವ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಪ್ರಣಬ್ ಮುಖರ್ಜಿ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿದೆ. 25 ದಿನಗಳ ಶಿಕ್ಷಾ ವರ್ಗ ಜೂನ್ 7ರಂದು ಮುಕ್ತಾಯವಾಗಲಿದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಣಬ್ ಮುಖರ್ಜಿ ಒಪ್ಪಿಗೆ ನೀಡಿರುವುದು ಎಲ್ಲರ ಹುಬ್ಬೇರಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಟಾಮ್ ವಡಕ್ಕನ್ ಕಾಂಗ್ರೆಸ್ ಹಾಗೂ ಆರ್ ಎಸ್‍ಎಸ್ ಸಿದ್ಧಾಂತಗಳಿಗೆ ಭಾರೀ ವ್ಯತ್ಯಾಸವಿದ್ದು, ಈ ಕುರಿತು ಸದ್ಯ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಣಬ್ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, ಮುಖರ್ಜಿ ಅವರು ಕಾಂಗ್ರೆಸ್ ಪದವಿ ಬಳಿಕ ರಾಜಕೀಯ ತೊರೆದಿದ್ದಾರೆ. ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅವರ ವಯಕ್ತಿಕ ನಂಬಿಕೆ, ನಿಲುವಿಗೆ ಸಂಬಂಧಿಸಿದೆ. ಅವರು ಕಳೆದ 50 ವರ್ಷಗಳಿಂದ ತಮ್ಮ ರಾಜಕೀಯ ಜೀವನದ ತತ್ವ ಸಿದ್ಧಾಂತಗಳು ಹಾಗೂ ಸದ್ಯದ ಹೇಳಿಕೆಗಳಿಗೂ ಹೋಲಿಕೆ ಮಾಡಬಹುದು ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರಣಬ್ ಅವರಿಗೆ ಪಾತ್ರ ಬರೆದಿರುವ ಕಾಂಗ್ರೆಸ್ ಹಿರಿಯ ನಾಯಕ ಸಿಕೆ ಜಾಫರ್ ಷರೀಫ್ ಅವರು, ದಶಕಗಳ ಕಾಲದ ಜಾತ್ಯತೀತ ರಾಜಕಾರಣ ಬಳಿಕ ತಾವು ತೆಗೆದುಕೊಂಡಿರುವ ನಿರ್ಧಾರ ಅಚ್ಚರಿಯನ್ನು ಉಂಟು ಮಾಡಿದ್ದು, ಲೋಕಸಭಾ ಚುನಾವಣೆ ವೇಳೆಯಲ್ಲಿ ಆರ್‌ಎಸ್‌ಎಸ್‌ ಆಹ್ವಾನ ಮನ್ನಿಸಿರುವುದು ಉತ್ತಮ ಎನಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ಮಾಜಿ ರಾಷ್ಟ್ರಪತಿಗಳ ನಿರ್ಧಾರವನ್ನು ಸಮರ್ಥಿಸಿರುವ ಹಿರಿಯ ನಾಯಕ ಎಚ್ ಆರ್ ಭಾರದ್ವಾಜ್ ಪ್ರಣಬ್‍ರ ತೀರ್ಮಾವನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪ್ರಣಬ್ ಅವರ ನಡೆ ಉತ್ತಮ ರಾಜಕೀಯ ಬೆಳವಣಿಗೆಗೆ ಕಾರಣವಾಗಿದ್ದು, ರಾಜಕೀಯ ಅಸ್ಪೃಶ್ಯತೆ ಸದ್ಯದ ಸ್ಥಿತಿಯಲ್ಲಿ ಅಪ್ರಸ್ತುತ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *