ನೂತನ ಸಿಎಂಗಾಗಿ 10 ಸಾವಿರ ಲಡ್ಡುಗಳು!

Public TV
0 Min Read

ರಾಮನಗರ: ಇಂದು ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಎಚ್‍ಡಿಕೆಯವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಹಿ ಹಂಚಲು ಮಾಜಿ ತಾಲೂಕು ಪಂಚಾಯ್ತಿ ಸದಸ್ಯರೊಬ್ಬರು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಬರೋಬ್ಬರಿ 10 ಸಾವಿರ ಲಡ್ಡುಗಳನ್ನ ಸಾರ್ವಜನಿಕರಿಗೆ ವಿತರಿಸಲು ಬೇವೂರು ಗ್ರಾಮದಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ.

ಬೇವೂರು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಸಿಹಿ ಹಂಚಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಯೊಂದರಲ್ಲಿ ಲಡ್ಡು ವಿತರಣೆಗೆ ಈಗಾಗಲೇ ಲಡ್ಡು ತಯಾರಿಸಿದ್ದು, ಇಂದು ಲಡ್ಡು ವಿತರಿಸಿ ಸಂಭ್ರಮಾಚರಣೆ ನಡೆಸಲು ಜೆಡಿಎಸ್ ಕಾರ್ಯಕರ್ತರು ಮುಂದಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *