ತುಮಕೂರು| ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

Public TV
1 Min Read

ತುಮಕೂರು: ಕೊರಟಗೆರೆ (Koratagere) ಪಟ್ಟಣ ಸೇರಿದಂತೆ ತುಮಕೂರು (Tumakuru) ತಾಲೂಕಿನ ಕೆಲವೆಡೆಗಳಲ್ಲಿ ಗಾಂಜಾ (Marijuana) ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಕ್ಯಾತಸಂದ್ರ ನಿವಾಸಿ ಚೇತನ್, ಗೋಕುಲ ಬಡಾವಣೆಯ ನಾಗರಾಜು, ಊರುಕೆರೆಯ ಪ್ರೀತಂ, ಊರುಕೆರೆ ಚೆಕ್‌ಪೋಸ್ಟ್ ಬಳಿಯ ಸಿಂಗಾವೇಲು ಬಂಧಿತ ಆರೋಪಿಗಳು. ಬಂಧಿತರು ಬೇರೆಡೆಯಿಂದ ಗಾಂಜಾವನ್ನು ಪ್ಯಾಕೆಟ್‌ಗಳಲ್ಲಿ ತಂದು ಪಟ್ಟಣ ಸೇರಿದಂತೆ ಕೆಲವು ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ವಿಜಯ – ಎನ್‌ಡಿಎ ಮೈತ್ರಿಕೂಟ ಪ್ರಮಾಣ ವಚನ ನಾಳೆ?

ಪಟ್ಟಣದ ಹೊರವಲಯದ ಬೈಲಾಂಜನೇಯ ದೇವಸ್ಥಾನದ ಬಳಿ ಸಣ್ಣ ಸಣ್ಣ ಪ್ಯಾಕ್‌ಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಪಿಎಸ್‌ಐ ಚೇತನ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷರೊಬ್ಬರೇ ಹೊಣೆಯಲ್ಲ: ಎನ್ ರವಿಕುಮಾರ್

Share This Article