ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

Public TV
1 Min Read

ಉಡುಪಿ: ಒಂದೇ ಕುಟುಂಬದ ನಾಲ್ವರು ಸೈನೈಡ್ ಸೇವಿಸಿ ತಿಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಪಡುಬೆಳ್ಳೆಯಲ್ಲಿ ನಡೆದಿದೆ.

ಶಂಕರ ಆಚಾರ್ಯ (50) ನಿರ್ಮಲಾ ಆಚಾರ್ಯ(44) ಅವರ ಮಕ್ಕಳಾದ ಶ್ರೇಯಾ( 22) ಶೃತಿ (23) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ಶಂಕರ್ ಆಚಾರ್ಯ ಅವರು ಕಳೆದ 30 ವರ್ಷದದಿಂದ ಪಡುಬೆಳ್ಳೆಯಲ್ಲಿ ಜ್ಯುವೆಲ್ಲರಿ ಶಾಪ್ ನಡೆಸುತ್ತಿದ್ದರು. ಶ್ರೇಯಾ ಮಣಿಪಾಲದಲ್ಲಿ ಎಂಬಿಎ ವ್ಯಾಸಂಗ ಮಾಡುತಿದ್ದು, ಶೃತಿ ಮೂಡುಬಿದರೆಯಲ್ಲಿ ಎಂಬಿಎ ಪೂರ್ಣಗೊಳಿಸಿ, ಸಿಎ ಪರೀಕ್ಷೆ ಪಾಸಾಗಿದ್ದು, ಹೈದರಾಬಾದ್‍ನಲ್ಲಿ ಉದ್ಯೋಗದಲ್ಲಿರುವ ಕಾರ್ಕಳ ನಿವಾಸಿಯೊಂದಿದೆ ಆಗಸ್ಟ್ ನಲ್ಲಿ ಮದುವೆ ನಿಶ್ಚಿತವಾಗಿತ್ತು. ಆದರೆ ಈ ಕುಟುಂಬದ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *