ಒಂದೇ ಕುಟುಂಬದ ನಾಲ್ವರಿಗೆ ಜೀವಾವಧಿ ಶಿಕ್ಷೆ

Public TV
1 Min Read

ರಾಯಚೂರು: 2010 ನವೆಂಬರ್ 10 ರಂದು ಕೌಟುಂಬಿಕ ಕಲಹ ಹಿನ್ನೆಯಲ್ಲಿ ಪತಿಯನ್ನೇ ಕೊಂದಿದ್ದ ಪತ್ನಿ ಸೇರಿ ನಾಲ್ಕು ಜನರಿಗೆ ರಾಯಚೂರಿನ ಒಂದನೇ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ತಲಾ 25 ಸಾವಿರ ರೂ. ದಂಡ ಹಾಕಿ ಕೋರ್ಟ್ ಆದೇಶಿಸಿದೆ.

ರಾಯಚೂರಿನ ಮಂಗಳವಾರಪೇಟೆ ನಿವಾಸಿ ಶ್ರೀನಿವಾಸ್ (36) ಎಂಬಾತನ ಯರಮರಸ್ ಬೈಪಾಸ್ ಬಳಿ ಕಬ್ಬಿಣದ ಸರಳಿನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೃತನ ಪತ್ನಿ ಮಹಾದೇವಿ, ಮಾವ ಬಸಪ್ಪ, ಅಳಿಯ ಹನುಮಂತ, ಅತ್ತೆ ಚಂದಮ್ಮಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎಂ.ಮಹಾದೇವಯ್ಯ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ಸುದರ್ಶನ ಅವರು ವಾದ ಮಂಡಿಸಿದ್ದರು.

 

 

Share This Article
Leave a Comment

Leave a Reply

Your email address will not be published. Required fields are marked *