ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ-ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

Public TV
1 Min Read

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಸಮೀಪದ ಬೆಟ್ಟಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ನಾಲ್ವರಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. 75 ವರ್ಷದ ವೆಂಕಟನರಸಪ್ಪ, ಪತ್ನಿ ತಾಯಮ್ಮ ಮತ್ತು ಮಗಳು ಹೊನ್ನಮ್ಮ ಮೃತರು. ವಿಷ ಸೇವಿಸಿದ ಮಗ ದೊಡ್ಡೇಗೌಡ ಎಂಬವರನ್ನು ನಗರದ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ದೊಡ್ಡೇಗೌಡ ಸ್ಥಿತಿ ಚಿಂತಾಜನಕವಾಗಿದೆ ವೈದ್ಯರು ತಿಳಿಸಿದ್ದಾರೆ.

ಕೌಟುಂಬಿಕ ಕಲಹದಲ್ಲಿ ತಂದೆ-ತಾಯಿ ಬೆಟ್ಟಹಳ್ಳಿಯ ಮನೆಯಲ್ಲಿ ವಿಷ ಸೇವಿಸಿದ ವಿಚಾರ ತಿಳಿದ ಅಕ್ಕ-ತಮ್ಮ ತಾವರೆಕೆರೆ ಬಳಿ ವಿಷ ಸೇವನೆ ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ದೊಡ್ಡೇಗೌಡರಿಗೆ ವಿವಾಹವಾಗಿದ್ದು, ಮನೆಯಲ್ಲಿ ಸಣ್ಣ-ಪುಟ್ಟ ಗಲಾಟೆಗಳು ನಡೆಯುತ್ತಿದ್ದವು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾದನಾಯಕನಹಳ್ಳಿ ಹಾಗೂ ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *