ಶಿವಮೊಗ್ಗದಲ್ಲಿ ಯುವಕನ ಕೊಲೆ – ನಾಲ್ವರಿಗೆ ಜೀವಾವಧಿ ಶಿಕ್ಷೆ

By
1 Min Read

ಶಿವಮೊಗ್ಗ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗ (Shivamogga) ಜಿಲ್ಲಾ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2017 ಫೆ.8 ರಂದು ಶಿವಮೊಗ್ಗದ ಅಣ್ಣಾನಗರದಲ್ಲಿ ಯುವಕ ಅಯಾತ್ ಹುಮಾಯುನ್ ನನ್ನು ಕ್ಷುಲ್ಲಕ ಕಾರಣಕ್ಕೆ ಅರ್ಬಾಜ್, ಶಾರುಖ್ ಖಾನ್, ಶಾಬಾದ್ ಹಾಗು ಅಲ್ಯಾಜ್ ಎಂಬ ನಾಲ್ವರು ಕೊಲೆ ಮಾಡಿದ್ದರು. ಘಟನೆ ನಂತರ ಹತ್ಯೆಯಾದ ಯುವಕನ ಕುಟುಂಬಸ್ಥರು ದೊಡ್ಡಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಇದನ್ನೂ ಓದಿ: ಕಾಡಾನೆಯೊಂದಿಗೆ ಸೆಲ್ಫಿ – 20 ಸಾವಿರ ರೂ. ದಂಡ

ಪ್ರಕರಣದ ಬೆನ್ನತ್ತಿದ್ದ ಪೊಲೀಸರು (Police) ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿದೆ. ಒಂದು ವೇಳೆ ದಂಡದ ಹಣ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದೆ. ಇದನ್ನೂ ಓದಿ: ಮಕ್ಕಳಾಗದ್ದಕ್ಕೆ ಕತ್ತು ಕುಯ್ದುಕೊಂಡು ಮಹಿಳೆ ಆತ್ಮಹತ್ಯೆ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್