ಫ್ರೀ ಬಸ್ ಎಫೆಕ್ಟ್ – ಉಸಿರುಗಟ್ಟಿ ಕಾಪಾಡಿ ಎಂದು ಕೂಗಿಕೊಂಡ ಮಹಿಳೆ

Public TV
1 Min Read

ತುಮಕೂರು: ಮಹಿಳಾ ಪ್ರಯಾಣಿಕರಿಗಾಗಿ ಸರ್ಕಾರ ನೀಡಿರುವ ಫ್ರೀ ಬಸ್ ಯೋಜನೆ (Shakti Scheme) ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಮೈಸೂರಿನಿಂದ ತುಮಕೂರಿಗೆ (Tumakuru) ಸಂಚರಿಸುತ್ತಿದ್ದ ಬಸ್‌ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ (Kunigal) ಪಟ್ಟಣದಲ್ಲಿ ನಡೆದಿದೆ.

ಅತಿಯಾದ ಜನಸಂದಣಿಯಲ್ಲಿ ಬಸ್‌ನೊಳಗೆ ಉಂಟಾದ ತೀವ್ರ ನೂಕಾಟ-ತಳ್ಳಾಟದಿಂದ ಮಹಿಳೆಯೊಬ್ಬರಿಗೆ ಉಸಿರಾಡಲು ತೀವ್ರ ತೊಂದರೆ ಉಂಟಾಗಿದೆ. ನನ್ನನ್ನು ಕಾಪಾಡಿ, ಬಸ್ಸಿನಿಂದ ಕೆಳಗಿಳಿಸಿ ಎಂದು ಜೋರಾಗಿ ಮಹಿಳಾ ಪ್ರಯಾಣಿಕರೊಬ್ಬರು ಕೂಗಿಕೊಂಡಿದ್ದಾರೆ. ತಕ್ಷಣವೇ ಬಸ್ಸು ನಿಲ್ಲಿಸಿದ ನಿರ್ವಾಹಕರು ಮಹಿಳೆಯನ್ನು ಕೆಳಗಿಳಿಸಿದ್ದಾರೆ. ಇದನ್ನೂ ಓದಿ: ಹಳೆ ಬೇರು ಹೊಸ ಚಿಗುರು ರೀತಿ ವಿಜಯೇಂದ್ರ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುತ್ತಿದ್ದಾರೆ: ರೇಣುಕಾಚಾರ್ಯ

ಈ ಬಸ್ ಮೈಸೂರು ತುಮಕೂರು ಮಾರ್ಗದಲ್ಲಿ ಸಂಚರಿಸುತ್ತಿತ್ತು. ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿದ್ದ ಮಹಿಳಾ ತಂಡ ಈ ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.  ಇದನ್ನೂ ಓದಿ: ಕಾಡಾನೆ ದಾಳಿ – ಮನೆ ಮೇಲೆ ತೆಂಗಿನ ಮರ ಬಿದ್ದು ಲಕ್ಷಾಂತರ ರೂ. ನಷ್ಟ

Share This Article