ಬೆರಳಿನಲ್ಲಿರುವ ಶಾಯಿ ತೋರಿಸಿದ್ರೆ ದಂತ ಚಿಕಿತ್ಸೆ ಉಚಿತ!

Public TV
0 Min Read

ಮೈಸೂರು: ಪ್ರತಿಯೊಬ್ಬ ನಾಗರಿಕನೂ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂಬ ಮತದಾನ ಜಾಗೃತಿಗಳು ಮೂಡಿ ಬಂದಿದೆ. ಆದ್ರೆ ಮೈಸೂರಿನಲ್ಲಿ ಮತದಾನ ಮಾಡಿದವರಿಗೆ ಉಚಿತವಾಗಿ ದಂತ ಚಿಕಿತ್ಸೆ ನೀಡಲಾಗುತ್ತಿದೆ.

ಹೌದು. ಮೈಸೂರಿನ ಹೆಬ್ಬಾಳದ ಸಂಕ್ರಾಂತಿ ವೃತ್ತದಲ್ಲಿರುವ ಸ್ಮೈಲ್ ಆರ್ಕಿಟೆಕ್ ಡೆಂಟಲ್ ಕ್ಲಿನಿಕ್ ನಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.


ಮೈಸೂರಿನ ಅನಿಫೌಂಡೇಶನ್ ವತಿಯಿಂದ ಈ ವಿಶಿಷ್ಟ ಅಭಿಯಾನ ನಡೆದಿದೆ. ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಮತದಾನ ಮಾಡಿ ಬಂದು ಬೆರಳಿನಲ್ಲಿರುವ ಶಾಯಿ ತೋರಿಸಿದರೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ.

ಬೆರಳಿನಲ್ಲಿ ಶಾಯಿ ಎಷ್ಟು ದಿನ ಇರುತ್ತದೆ ಅಲ್ಲಿವರೆಗೂ ಉಚಿತ ಚಿಕಿತ್ಸೆ ಸೌಲಭ್ಯ ಪಡೆಯಬಹುದು ಎಂಬುದಾಗಿ ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *