ಗೆಳೆಯನನ್ನು ಕಾಪಾಡಲು ಹೋಗಿ ಸ್ನೇಹಿತರಿಬ್ಬರು ಪ್ರಾಣ ಬಿಟ್ಟರು

Public TV
1 Min Read

ಕೊಪ್ಪಳ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದ ಕೆರೆಯಲ್ಲಿ ನಡೆದಿದೆ.

ರಾಜೇಶ್ ಕುಮಾರ್(26) ಮತ್ತು ಮಧುಕಿರಣ್ (25) ಮೃತರು. ಇವರು ಹೈದ್ರಾಬಾದ್ ಮೂಲದವರಾಗಿದ್ದು, ಗಂಗಾವತಿಯ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಂತರ ಮೃತ ದೇಹ ಪತ್ತೆಯಾಗಿವೆ. ಪ್ರವಾಸಕ್ಕೆ ಬಂದಿರುವ  ನಾಲ್ವರು ಯುವಕರು ಸಾಣಾಪುರ ಕೆರೆ ದಡದ ಮೇಲೆ ಸ್ನಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಇದನ್ನೂ ಓದಿ:  ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

ನಾಲ್ವರ ಪೈಕಿ ಕೇವಲ ಒಬ್ಬರಿಗೆ ಮಾತ್ರ ಈಜು ಬರುತ್ತಿತ್ತು. ಅಲೋಕ್ ಕುಮಾರ್ ಮಾತ್ರ ಕೆರೆಯಲ್ಲಿ ಈಜಲು ಹೋಗಿದ್ದ ಇನ್ನೂಳಿದ ಮೂವರು ಕೆರೆ ದಡದ ಬಂಡೆಯ ಮೇಲೆ ಕುಳಿತು ಸ್ನಾನ ಮಾಡುತ್ತಿದ್ದರು. ಇನ್ನೂ ಅಲೋಕ್ ಕುಮಾರ್ ಸ್ವೀಮೀಂಗ್ ಮುಗಿಸಿಕೊಂಡು ಮೇಲೆ ಬಂದಿದಾನೆ. ಈ ವೇಳೆ ಇನ್ನೂ ಬಂಡೆಯ ಮೇಲೆ ಕುಳಿತು ಸ್ನಾನ ಮಾಡುತ್ತಿದ್ದ ಮೂವರಲ್ಲಿ ನರಸಿಂಹ ಎಂಬಾತ ಕಾಲು ಜಾರಿ ಕೆರಯಲ್ಲಿ ಬಿದ್ದಿದ್ದಾನೆ. ನರಸಿಂಹ ಕೆರೆಯಲ್ಲಿ ಬಿಳುತ್ತಿದ್ದಂತೆ ಆತನನ್ನು ಕಾಪಡಲು ಈಜು ಬಾರದ ರಾಜೇಶ್ ಮತ್ತು ಮಧು ಕಿರಣ ಕೆರೆಗೆ ಹಾರಿದ್ದಾರೆ. ಇದನ್ನು ನೋಡಿದ ಅಲೋಕ್ ಮೂವರನ್ನು ಕಾಪಾಡಲು ಆತನು ಕೆರೆಗೆ ಹಾರಿದ್ದಾನೆ ಆದರೆ ವಿಧಿಯಾಟ ಕಾಲು ಜಾರಿ ಬಿದ್ದ ನರಸಿಂಗ್ ನನ್ನು ಮಾತ್ರ ಅಲೋಕ್ ಕಾಪಾಡಲು ಸಾಧ್ಯವಾಯಿತು ನರಸಿಂಗ್‍ನನ್ನು ದಡೆಕ್ಕೆ ತಂದು ಬಿಡುವಷ್ಟರಲ್ಲಿ ತನ್ನ ಇನ್ನಿಬರು ಸ್ನೇಹಿತರು ನೀರುಪಾಲಾಗಿದ್ದರು. ಇನ್ನೂ ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ:  ಯಡಿಯೂರಪ್ಪ ಅವರನ್ನು ಯಾವ ಸಮುದ್ರಕ್ಕೆ ಎಸೆದಿದ್ದೀರಿ: ಬಿಜೆಪಿಗೆ ಡಿಕೆಶಿ ಪ್ರಶ್ನೆ

Share This Article
Leave a Comment

Leave a Reply

Your email address will not be published. Required fields are marked *