ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ ಕರೆ ನೀಡ್ತೆವೆ – ವಾಟಾಳ್

Public TV
1 Min Read

ರಾಮನಗರ: ಸಾರಿಗೆ ನೌಕರರ ಬೇಡಿಕೆ ಈಡೇರಿಸಿ ಅವರ ಸಮಸ್ಯೆ ಬಗೆಹರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ತಿಳಿಸಿದ್ದಾರೆ.ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ

ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ರಾಮನಗರದಲ್ಲಿ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಬೇಡಿಕೆ ಸರಿಯಾಗಿದೆ. ಯಾವ ಸರ್ಕಾರವೂ ಅವರ ಸಮಸ್ಯೆಯನ್ನು ಆಲಿಸಿಲ್ಲ. ಹೀಗಾಗಿ ಅವರ ಹಳೆಯ ಸಂಬಳವನ್ನ ಕೊಟ್ಟುಬಿಡಿ. ಅವರ 36 ತಿಂಗಳ ಸಂಬಳ ಯಾಕೆ ಬಾಕಿ ಇಟ್ಟಿಕೊಂಡಿದ್ದೀರಿ? ಬಾಕಿ ಇಟ್ಕೊಂಡ್ರೆ ನೌಕರರ ಜೀವನ ಹೇಗೆ ನಡೆಯಬೇಕು ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಅವರು ಕೂಡಲೇ ಅವರ ಬೇಡಿಕೆ ಈಡೇರಿಸಬೇಕು. ಸಾರಿಗೆ ನೌಕರರ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯ ಸರ್ಕಾರ ಕೂಡಲೇ ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಅವರ ಜೊತೆ ಸೇರಿ ನಾವು ಹೋರಾಟ ಮಾಡ್ತೀವಿ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

Share This Article