ಪೆಟ್ರೋಲ್ ಕೇಳಿದ್ರೆ ತುಂಬಿಸಿದ್ದೇ ಬೇರೆ- ಚಿಕ್ಕಬಳ್ಳಾಪುರದಲ್ಲಿ ಬಂಕ್‍ಗೆ ಜನರ ಮುತ್ತಿಗೆ, ಆಕ್ರೋಶ

Public TV
1 Min Read

ಚಿಕ್ಕಬಳ್ಳಾಪುರ: ಪೆಟ್ರೋಲ್ ಬಂಕ್ ನಲ್ಲಿ ಆಸಲಿ ಪೆಟ್ರೋಲ್ ಬದಲು ನೀರು ಮಿಶ್ರಿತ ಪೆಟ್ರೋಲ್ ಮಾರಾಟ ಮಾಡುತ್ತಿರುವ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಚಿನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಪಾಪಣ್ಣ ಎಂಬವರಿಗೆ ಸೇರಿದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‍ನಲ್ಲಿ ನೀರು ಮಿಶ್ರಿತ ಪೆಟ್ರೋಲ್ ಮಾರಾಟ ಮಾಡಲಾಗಿದೆ. ನೀರು ಮಿಶ್ರಿತ ಪೆಟ್ರೋಲ್ ಹಾಕಿಸಿಕೊಂಡ ಬೈಕ್ ಎಲ್ಲೆಂದರಲ್ಲಿ ಕೆಟ್ಟು ನಿಂತಿದ್ದು, ಇದ್ರಿಂದ ರೊಚ್ಚಿಗೆದ್ದ ಗ್ರಾಹಕರು ಪೆಟ್ರೋಲ್ ಬಂಕ್‍ಗೆ ಮುತ್ತಿಗೆ ಹಾಕಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೆಟ್ರೋಲ್‍ನಲ್ಲಿ ನೀರು ಮಿಶ್ರಿತವಾಗಿರುವುದು ಬೆಳಕಿಗೆ ಬಂದಿದೆ. ಇದ್ರಿಂದ ರೊಚ್ಚಿಗೆದ್ದ ಗ್ರಾಹಕರು ಪೆಟ್ರೋಲ್ ಬಂಕ್ ಮಾಲೀಕ ಹಾಗೂ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದು, ಪೆಟ್ರೋಲ್ ಬಂಕ್ ತೆರೆಯದಂತೆ ಮಾಲೀಕನಿಗೆ ಪೊಲೀಸರು ತಾಕೀತು ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *