ಮತ್ತೆ ಜೊತೆಜೊತೆಯಲಿ – ಒಟ್ಟಿಗೆ ಉಪಹಾರ ಸೇವಿಸಿದ ಜಿಟಿಡಿ, ಪ್ರತಾಪ್ ಸಿಂಹ

Public TV
1 Min Read

ಮೈಸೂರು: ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಾಜಕೀಯದಲ್ಲಿ ಕುಸ್ತಿ ಆಡುವ ಜೆಡಿಎಸ್, ಬಿಜೆಪಿ ನಾಯಕರು ಕಾರ್ಯಕ್ರಮಗಳಲ್ಲಿ ಜೊತೆಯಾಗಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಜಿ.ಟಿ ದೇವೇಗೌಡ ಅವರು ಮತ್ತೆ ಜೊತೆಯಾಗಿ ಕಾಣಿಸಿಕೊಂಡು ಭಾರೀ ಸುದ್ದಿಯಾಗುತ್ತಿದ್ದಾರೆ. ಹೌದು. ಮೈಸೂರು ತಾಲೂಕಿನ ಮರಟಿ ಕ್ಯಾತನಹಳ್ಳಿಯಲ್ಲಿ ಗ್ರಾಮ ಪಂಚಾಯತ್ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯಲ್ಲಿ ಎರಡೂ ನಾಯಕರು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶನ ನೀಡಿದ್ದಾರೆ.

ಅಷ್ಟೇ ಅಲ್ಲದೆ ತಾಲೂಕು ಪಂಚಾಯತ್ ಜೆಡಿಎಸ್ ಸದಸ್ಯೆ ಮನೆಯಲ್ಲಿ ಉಪಹಾರ ಸೇವನೆ ಮಾಡಿ, ಬಳಿಕ ಜಿಟಿಡಿ, ಪ್ರತಾಪ್ ಸಿಎಂ ಅವರು ಒಂದೇ ಕಾರಿನಲ್ಲಿ ಸಂಚರಿಸಿರುವುದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಈ ಹಿಂದೆ ಒಂದೇ ಕಾರಿನಲ್ಲಿ ಪ್ರತಾಪ್ ಸಿಂಹ, ಜಿ.ಟಿ ದೇವೇಗೌಡ ಹಾಗೂ ಸಚಿವ ಸಾ.ರಾ.ಮಹೇಶ್ ಜೊತೆಯಾಗಿ ಓಡಾಟ ನಡೆಸಿ ಅಚ್ಚರಿ ಮೂಡಿಸಿದ್ದರು.

ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕ್ರಮದಲ್ಲಿ ಜಿಟಿಡಿ ಹಾಗೂ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ನಂತರ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರಾದ ರಾಮದಾಸ್, ನಾಗೇಂದ್ರ ಅವರು ಸಹ ನಾಯಕರಿಗೆ ಸಾಥ್ ನೀಡಿದ್ದರು.

ಲೋಕಸಭಾ ಚುನಾವಣೆಯ ಸಮಯದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಮೈಸೂರಿನಿಂದ ಕಾಂಗ್ರೆಸ್ಸಿನ ವಿಜಯಶಂಕರ್ ಕಣಕ್ಕೆ ಇಳಿದಾಗ ಸಿಂಹ ವಿರುದ್ಧ ಜೆಡಿಎಸ್ ನಾಯಕರು ಪ್ರಚಾರ ನಡೆಸಿದ್ದರು. ಆದರೆ ಈಗ ಪದೇ ಪದೇ ಬಿಜೆಪಿ ನಾಯಕನ ಜೊತೆ ಜೆಡಿಎಸ್ ನಾಯಕರು ಓಡಾಡುತ್ತಿರುವ ವಿಚಾರ ರಾಜಕೀಯ ವಲಯದಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *