ಪತಿ-ಪತ್ನಿಯ ವೈಮನಸ್ಸಿನಿಂದ ನಡೆದೇಹೋಯ್ತು ಘೋರ ದುರಂತ – ಮಹಿಳೆ ಮೇಲೆ ಗ್ಯಾಂಗ್‌ ರೇಪ್‌

Public TV
2 Min Read

– ಮೂರು ತಿಂಗಳ ಹಿಂದೆಯಷ್ಟೇ ಪ್ರೇಮಿಸಿ ವಿವಾಹವಾಗಿದ್ದ ದಂಪತಿ

ಕೊಪ್ಪಳ: ಪ್ರೇಮಿಸಿ ವಿವಾಹವಾಗಿದ್ದ ದಂಪತಿ ನಡುವಿನ ವೈಮನಸ್ಸು ಘೋರ ದುರಂತಕ್ಕೆ ಎಡೆ ಮಾಡಿಕೊಟ್ಟಿದೆ. ನಶೆಯಲ್ಲಿದ್ದ ಕಿರಾತಕರ ಗುಂಪೊಂದು ಪತಿಯನ್ನು ಥಳಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗಂಗಾವತಿ ಕೇಂದ್ರಿಯ ಬಸ್ ನಿಲ್ದಾಣದ ಎದುರಿಗಿರುವ ಉದ್ಯಾನದಲ್ಲಿ ನಡೆದಿದೆ.

STOP RAPE

ಕೊಪ್ಪಳದ ಗಂಗಾವತಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿರುವ ಕೇಂದ್ರ ಬಸ್ ನಿಲ್ದಾಣದಲ್ಲಿ ಗಲಾಟೆಯಾಗಿದ್ದು, ಬಳಿಕ ಮಹಿಳೆ ರಕ್ಷಣೆಗಾಗಿ ಸಮೀಪದ ನೆಹರೂ ಪಾರ್ಕ್‌ ಕಡೆಗೆ ಓಡಿ ಹೋಗಿದ್ದಾಳೆ. ಈ ಸಂದರ್ಭದಲ್ಲಿ ಆಕೆ ಮೇಲೆ ಎರಗಿದ ಕಿರಾತಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಪೈಕಿ ಲಿಂಗರಾಜ ಎಂಬ ಯುವಕ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಿಕ್ಕ ಆರೋಪಿಗಳನ್ನು ಮೌಲಹುಸೇನ್, ಶಿವಕುಮಾರಸ್ವಾಮಿ, ಪ್ರಶಾಂತ, ಮಹೇಶ ಮತ್ತು ಮಾದೇಶ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಹೊಸಕೋಟೆ ಸಮೀಪ ಸರಣಿ ಅಪಘಾತ – ಸ್ಥಳದಲ್ಲೇ ಯುವತಿ ದಾರುಣ ಸಾವು!

ಪತಿ-ಪತ್ನಿಯರ ಜಗಳವೇ ಕೃತ್ಯಕ್ಕೆ ಕಾರಣವಾಯ್ತಾ?
ಬೆಂಗಳೂರಿನ ಗೊರಗುಂಟೆಪಾಳ್ಯದ 21 ವರ್ಷ ವಯಸ್ಸಿನ ಯುವತಿ, ಗಂಗಾವತಿ ತಾಲ್ಲೂಕಿನ ಸಿದ್ಧಾಪುರದ ಯುವಕನನ್ನು ಪ್ರೀತಿಸಿ ಮೂರು ತಿಂಗಳ ಹಿಂದೆಯಷ್ಟೇ ಹುಲಿಗಿ ಗ್ರಾಮದ ದೇವಸ್ಥಾನದಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಈ ಮಧ್ಯೆ ದಾಂಪತ್ಯ ಜೀವನದಲ್ಲಿ ವಿರಸ ಉಂಟಾಗಿದ್ದು, ಪತಿ ತನ್ನ ಪತ್ನಿಯನ್ನು ಬಿಟ್ಟು ಬಂದಿದ್ದಾನೆ. ಪತಿಯನ್ನು ಹುಡುಕಿಕೊಂಡು ಪತ್ನಿ ಶುಕ್ರವಾರ ತಡರಾತ್ರಿ ಗಂಗಾವತಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ. ಇತ್ತ ಪತಿಯೂ ಪತ್ನಿಗಾಗಿ ಬಸ್ ನಿಲ್ದಾಣಕ್ಕೆ ಬಂದಿದ್ದಾನೆ. ಪತಿ-ಪತ್ನಿಯರು ಪರಸ್ಪರ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಪತ್ನಿ ತನ್ನ ಪತಿಯೊಂದಿಗೆ ಜಗಳಕ್ಕೆ ಇಳಿದಿದ್ದಾಳೆ. ಇದನ್ನು ಗಮನಿಸಿದ ಆರು ಜನರ ತಂಡವೊಂದು ಅಲ್ಲಿಗೆ ಆಗಮಿಸಿದೆ. ಮಹಿಳೆಯನ್ನ ಯುವಕ ಚುಡಾಯಿಸುತ್ತಿದ್ದಾನೆ ಎಂದು ಭಾವಿಸಿ ಪತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಒಂದೇ ಬೈಕ್ ಮೇಲೆ 300 ಕೇಸ್ – ಬರೋಬ್ಬರಿ 3 ಲಕ್ಷ ದಂಡ

ಈ ಸಂದರ್ಭದಲ್ಲಿ ಮಹಿಳೆ, ಆತ ನನ್ನ ಗಂಡ ಎಂದು ಕೂಗಿ ಹೇಳಿದರೂ ಕೇಳಿಸಿಕೊಳ್ಳದ ಯುವಕರು, ಪತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಗಾಬರಿಗೊಂಡ ಮಹಿಳೆ, ತನ್ನ ರಕ್ಷಣೆಗಾಗಿ ಸಮೀಪದ ಪಾರ್ಕ್ ಕಡೆ ಓಡಿ ಹೋಗಿದ್ದಾಳೆ. ಹಿಂಬಾಲಿಸಿಕೊಂಡು ಬಂದ ಕಾಮುಕರ ಗುಂಪು, ಆಕೆ ಮೈ ಮೇಲಿದ್ದ ಬಟ್ಟೆ ಹರಿದು ಮೈ ಮೇಲೆರಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಪೈಕಿ ಒಬ್ಬ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಅಷ್ಟು ಹೊತ್ತಿಗೆ ಹಲ್ಲೆಗೊಳಗಾದ ಪತಿ, ಕೆಲ ಸ್ಥಳೀಯರು ಹಾಗೂ ಆಟೋ ರಿಕ್ಷಾ ಚಾಲಕರನ್ನು ಕರೆತರುವ ಹೊತ್ತಿಗೆ ಯುವಕರು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ನಮ್ಮ ಹಿಂದುತ್ವ ಬೆಂಬಲಿಸುತ್ತಾರೆ.. ಬಿಜೆಪಿ ಹಿಂದುತ್ವ ತಿರಸ್ಕರಿಸುತ್ತಾರೆ: ಉದ್ಧವ್‌ ಠಾಕ್ರೆ

Share This Article