ಗಂಧದಗುಡಿ ಅಪ್ಪು ಕೊನೆಯ ಚಿತ್ರವಲ್ಲ: ಶಿವರಾಜ್ ಕುಮಾರ್

Public TV
1 Min Read

ಟ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯ ಚಿತ್ರ ತೆರೆಕಂಡಿದೆ. ಈ ಸಂಬಂಧ ನಟ ಶಿವರಾಜ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಗಂಧದ ಗುಡಿ ಅಪ್ಪು ಕೊನೆಯ ಚಿತ್ರವಲ್ಲ ಎಂದು ಹೇಳಿದ್ದಾರೆ.

ಚಿತ್ರ ವೀಕ್ಷಣೆಗೂ ಮುನ್ನ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನು ಇಂದು ಸಂಜೆ ಸಿನಿಮಾ ವೀಕ್ಷಣೆ ಮಾಡುತ್ತೇನೆ. ಗಂಧದಗುಡಿ ಅಪ್ಪು ಅವರ ಕೊನೆಯ ಚಿತ್ರ ಅಲ್ಲ. ಇದು ಆರಂಭ, ಅಪ್ಪು ಯಾವಾಗಲೂ ನಮ್ಮ ಜೊತೆ ಇರುತ್ತಾರೆ ಎಂದು ಭಾವುಕರಾದರು.

ಪ್ರಕೃತಿಯ ಬಗ್ಗೆ ಗಂಧದಗುಡಿಯಲ್ಲಿ ಅಪ್ಪಾಜಿ ತಿಳಿಸಿದ್ರು. ಅದರಿಂದ ಅದೆಷ್ಟೋ ಜನ ಪ್ರೇರಣೆಯಾಗಿದ್ರು, ನನ್ನ ಅದೃಷ್ಟ ನಾನು ಗಂಧದಗುಡಿ ಪಾರ್ಟ್ 2 ಮಾಡಿದ್ದೆ. ಇಂದು ಅತಿವೃಷ್ಠಿ ಆಗ್ತಿದೆ. ಪ್ರಕೃತಿಯಲ್ಲಿ ಏರೇಪೇರು ಆಗುತ್ತಿದೆ ಎಂದರು. ಇದನ್ನೂ ಓದಿ: ಅಪ್ಪು ಕನಸಿನ ಗಂಧದಗುಡಿ ದರ್ಶನ- ಥಿಯೇಟರ್ ಅಂಗಳದಲ್ಲಿ ಅಭಿಮಾನಿಗಳ ಸಂಭ್ರಮ

ಕಾಡಿನ ಮಹತ್ವದ ಬಗ್ಗೆ ಅಪ್ಪು ತಿಳಿಸಿದ್ದಾರೆ. ಅಭಿಮಾನಿಗಳು ಅಪ್ಪುವನ್ನ ನೋಡಲು ಬರಬೇಕು. ಅವರಿಗೆ ಈ ಮೂಲಕ ಗೌರವ ಕೊಡಬೇಕು ಎಂದು ಶಿವಣ್ಣ ಮನವಿ ಮಾಡಿಕೊಂಡರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *