ಮೃತ ಮೂವರು ಯುವಕರ ಗ್ರಾಮದಲ್ಲಿ ಪಟಾಕಿ ಹಚ್ಚದೆ ಗಣೇಶ ಹಬ್ಬ ಆಚರಣೆ- ಯಾಕೆ..?

Public TV
1 Min Read

ಹಾವೇರಿ: ಕಳೆದ ತಿಂಗಳು ಆಗಸ್ಟ್ 29 ರಂದು ನಡೆದ ಪಟಾಕಿ ಅಂಗಡಿಯ ಅಗ್ನಿ ದುರಂತದಲ್ಲಿ ಒಂದೇ ಗ್ರಾಮದ ಮೂವರು ಯುವಕರು ಮೃತಪಟ್ಟಿದ್ದರು. ಆ ಯುವಕರ ಸ್ವಗ್ರಾಮ ಹಾವೇರಿ ತಾಲೂಕಿನ ಕಾಟೇನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಪಟಾಕಿ (Firecracker) ಹಚ್ಚದೆ ಗಣಪತಿ ಹಬ್ಬವನ್ನು (Ganesh Chaturthi) ಸರಳವಾಗಿ ಆಚರಣೆ ಮಾಡಿದ್ದಾರೆ.

ಗ್ರಾಮದ ದೇವಸ್ಥಾನದಿಂದ ಗ್ರಾಮದ ಶಾಲೆಗೆ ಗಣಪತಿಯ ಮೆರವಣಿಗೆಯಲ್ಲಿ ಪಟಾಕಿ ಬಳಕೆ ಮಾಡದೆ ತಂದಿದ್ದಾರೆ. ಸಪ್ಟೆಂಬರ್ 29 ರಂದು ಹಾವೇರಿಯ ಆಲದಕಟ್ಟಿ ಪಟಾಕಿ ಅಂಗಡಿಯಲ್ಲಿ ಒಂದೇ ಗ್ರಾಮದ ಯುವಕರಾದ, ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ, ದ್ಯಾಮಪ್ಪ ಓಲೇಕಾರ ಮೃತಪಟ್ಟಿದ್ದರು. ಈ ಮೂವರು ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು. ಹಳೆ ವಿದ್ಯಾರ್ಥಿಗಳ ಸ್ಮರಣಾರ್ಥ ಪಟಾಕಿ ಹಚ್ಚದೆ ಗಣೇಶ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ದೇಶದ ಶ್ರೀಮಂತ ಗಣೇಶನಿಗೆ ಬರೋಬ್ಬರಿ 360 ಕೋಟಿ ಇನ್ಶುರೆನ್ಸ್‌; 69 ಕೆಜಿ ಚಿನ್ನ, 336 ಕೆಜಿ ಬೆಳ್ಳಿ ಅಲಂಕಾರ

ಗ್ರಾಮದ ಬಹುತೇಕ ಜನರು ಪಟಾಕಿ ಬಳಸದೆ ಗಣೇಶ ಪ್ರತಿಷ್ಠಾಪನೆ ಮಾಡಿ, ಪಟಾಕಿ ದುರಂತದಲ್ಲಿ ಮೃತಪಟ್ಟ ಯುವಕರಿಗೆ, ಸರಳವಾಗಿ ಗಣೇಶ ಹಬ್ಬ ಆಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿದರು. ಇದನ್ನೂ ಓದಿ: ಗಣೇಶ ಹಬ್ಬದಂದು ಮಗ ಮನೆಗೆ ಬಂದಿದ್ದಾನೆ- ಧ್ರುವ ಸರ್ಜಾ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್