ಶಿರಾದಲ್ಲಿ ಅದ್ಧೂರಿ ಮೆರವಣಿಗೆ ಮಾಡಿ ಗಣೇಶ ವಿಸರ್ಜನೆ

Public TV
1 Min Read

ತುಮಕೂರು: ಶಿರಾ ನಗರದ ಗವಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಹಿಂದೂ ಮಹಾ ಗಣಪತಿಯನ್ನು ಅದ್ಧೂರಿ ಮೆರವಣಿಗೆ ನಡೆಸಿ ಜಾಜಮ್ಮನ ಕಟ್ಟೆಯಲ್ಲಿ ವಿಸರ್ಜಿಸಲಾಯಿತು.

ಹಿಂದೂ ಮಹಾ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿದ ಮೂರನೇ ದಿನವೇ ವಿಸರ್ಜನೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಆದರೆ ಕೊರೊನಾ ನಿಯಮಾವಳಿಯಂತೆ ಮೆರವಣಿಗೆಗೆ ಅವಕಾಶವಿಲ್ಲ. ವಿಸರ್ಜನೆ ಸಮಯದಲ್ಲಿ ಕೇವಲ 20 ಮಂದಿಗೆ ಮಾತ್ರ ಅವಕಾಶ ನೀಡುವುದಾಗಿ ಪೊಲೀಸರು ಷರತ್ತು ವಿಧಿಸಿದಾಗ ಹಿಂದೂ ಸಭಾದ ಕಾರ್ಯಕರ್ತರು ಇದನ್ನು ವಿರೋಧಿಸಿ ಗಣೇಶ ವಿಸರ್ಜನೆಯನ್ನು ಅನಿರ್ದಿಷ್ಟ ಕಾಲಕ್ಕೆ ಮುಂದೂಡಿದ್ದರು. ಇದನ್ನೂ ಓದಿ: 2022ರ ಪ್ರೇಮಿಗಳ ದಿನ ಬರಲಿದೆ ‘ಲಾಲ್ ಸಿಂಗ್ ಚಡ್ಡಾ’

ಗಣೇಶ ವಿಸರ್ಜನೆಯ ಮೆರವಣಿಗೆ ಸಮಯದಲ್ಲಿ ಡಿ.ಜೆಗೆ ಪೊಲೀಸರು ಅವಕಾಶ ನೀಡದಿದ್ದರೂ ಸಹ ಡ್ರಂ ಸೆಟ್ ಜೊತೆಯಲ್ಲಿ ಮೆರವಣಿಗೆ ಪ್ರಾರಂಭಿಸಿದರು. ಆದರೆ ಮೆರವಣಿಗೆಯ ಮಧ್ಯೆ ಡಿ.ಜೆಯನ್ನು ಸೇರಿಸಿಕೊಂಡು ಭಕ್ತರು ಸಂಭ್ರಮಿಸಲು ಪ್ರಾರಂಭಿಸಿದರು. ಸಂಜೆಯ ವೇಳೆಗೆ ಮೆರಣಿಗೆಯ ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರವಾಡ್ ಅವರು ಡಿಜೆಗೆ ಅನುಮತಿ ನೀಡಲಿಲ್ಲ. ಅದನ್ನು ಬಂದ್ ಮಾಡಿ ಮೆರವಣಿಗೆ ಮುಂದುವರೆಸುವಂತೆ ಹೇಳಿದರು.

ಈ ಸಮಯದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಮೆರವಣಿಗೆ ಸ್ಥಗಿತಗೊಳಿಸಲು ಮುಂದಾದ ಸಮಯದಲ್ಲಿ ಡಿ.ಜೆಗೆ ಮತ್ತೆ ಅವಕಾಶ ಮಾಡಿಕೊಡಲಾಯಿತು. ನಗರದ ವಿವಿಧ ರಸ್ತೆಗಳಲ್ಲಿ ದಿನಪೂರ್ತಿ ಮೆರವಣಿಗೆ ನಡೆಸಿ ಜಾಜಮ್ಮನ ಕಟ್ಟೆಯಲ್ಲಿ ವಿಸರ್ಜಿಸಲಾಯಿತು. ಇದನ್ನೂ ಓದಿ: ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಉಪಾಧ್ಯಕ್ಷರಾದ ಕನ್ನಡತಿ

ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ, ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಆರ್.ಉಗ್ರೇಶ್, ಮುಖಂಡರಾದ ಆರ್.ರಾಮು, ಆರ್.ರಾಘವೇಂದ್ರ, ಅಂಜಿನಪ್ಪ, ರೂಪೇಶ್ ಕೃಷ್ಣಯ್ಯ, ಭಾನುಪ್ರಕಾಶ್, ಬಿಜೆಪಿ ಅಧ್ಯಕ್ಷ ವಿಜಯರಾಜು ಅವರು ಮೆರವಣಿಗೆಯ ಪ್ರಾರಂಭದಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *