ಮನೆ ಮನೆಗೆ ಗಂಗಾ ನೀರು ಕುಡಿಯೋ ಯೋಜನೆಗೆ ಸರ್ಕಾರದ ಸಿದ್ಧತೆ

Public TV
1 Min Read

ಬೆಂಗಳೂರು: ಪ್ರತಿಯೊಂದು ಮನೆಗೂ ಕುಡಿಯುವ ನೀರು ಕೊಡುವ ಹೊಸ ಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಮೂಲಕ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಕೊಡುವ ಮಹತ್ವಾಕಾಂಕ್ಷೆಯ ಯೋಜನೆಗೆ ಸಿದ್ಧತೆ ಮಾಡಿಕೊಂಡಿದೆ.

ವಿಧಾನಸೌಧದಲ್ಲಿ ಹೊಸ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಮಾಹಿತಿ ನೀಡಿದರು. ಮನೆ ಮನೆಗೆ ಕುಡಿಯುವ ನೀರು ಕೊಡುವ ಗಂಗಾ ಯೋಜನೆ ಜಾರಿಗೆ ನಿರ್ಧಾರ ಮಾಡಿದ್ದೇವೆ. ಇನ್ನೊಂದು ತಿಂಗಳಲ್ಲಿ ಯೋಜನೆ ಸಿದ್ಧತೆ ಪೂರ್ಣಗೊಳ್ಳಲಿದೆ. ಕೊಳಾಯಿ ಮೂಲಕ ಮನೆ ಮನೆಗೆ ನೀರು ಕೊಡುವ ಯೋಜನೆ ಇದಾಗಿದೆ. ವರದಿ ಸಿದ್ಧವಾದ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ. ಕೇಂದ್ರ ಈ ಯೋಜನೆಗೆ ಎಷ್ಟು ಅನುದಾನ ಕೊಡುತ್ತೆ ನೋಡಿಕೊಂಡು ರಾಜ್ಯ ಸರ್ಕಾರ ಇದ್ರ ಬಗ್ಗೆ ನಿರ್ಧಾರ ಮಾಡುತ್ತೆ ಅಂತ ಸ್ಪಷ್ಟಪಡಿಸಿದರು.

ಏನಿದು ಗಂಗಾ ಯೋಜನೆ?
ಪ್ರತಿಯೊಬ್ಬರಿಗೂ ಶುದ್ಧವಾದ ಕುಡಿಯುವ ನೀರು ನೀಡುವುದು ಈ ಯೋಜನೆ ಉದ್ದೇಶ. ಪೈಪ್ ಗಳ ಮೂಲಕ ಮನೆ ಮನೆಗೆ ಕೊಳಾಯಿ ಹಾಕಿ ನೀರು ಸರಬರಾಜು ಮಾಡೋದು. ತಿಂಗಳಿಗೆ ಇಂತಿಷ್ಟು ಅಂತ ಶುಲ್ಕ ವಿಧಿಸೋದು. ಸರ್ಕಾರವೇ ನೀರು ಬಿಡುವ ನಿರ್ವಹಣೆ ಮಾಡುವದರಿಂದ ಹೆಚ್ಚು ನೀರು ಪೋಲು ಆಗದಂತೆ ತಡೆಯೋದು. ಈ ಮೂಲಕ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *