ಮೈಸೂರಿನಲ್ಲಿ ಮತ್ತೆ ಗ್ಯಾಂಗ್ ವಾರ್ – ಅವ್ವ ಮಾದೇಶ್ ಆಪ್ತನ ಬರ್ಬರ ಹತ್ಯೆ

Public TV
1 Min Read

ಮೈಸೂರು: ನಗರದಲ್ಲಿ ಮತ್ತೆ ಗ್ಯಾಂಗ್‌ವಾರ್ (Gangwar) ಶುರುವಾಗಿದ್ದು, ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆ ನಡೆದಿದೆ.

ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಬರ್ಬರವಾಗಿ ಕೊಲೆಯಾಗಿದ್ದಾನೆ. ಈತ ಮಾಜಿ ನಗರ ಪಾಲಿಕೆ ಸದಸ್ಯ ಅವ್ವ ಮಾದೇಶ್ (Avva Madesh) ಆಪ್ತ ಎಂದು ತಿಳಿಬಂದಿದೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್ ರೇಪ್ ಮಾಡಿ ಖಾಸಗಿ ಅಂಗಕ್ಕೆ ಚಿಲ್ಲಿ ಪೌಡರ್ ಹಾಕಿದ ವಿವಾಹಿತ!

ಮಚ್ಚು ಲಾಂಗ್ ಹಿಡಿದುಕೊಂಡು ದ್ವಿಚಕ್ರ ವಾಹನದಲ್ಲಿ ಬಂದ 6 ಜನ ದುಷ್ಕರ್ಮಿಗಳು ಚಂದುನನ್ನ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಆ ನಿರ್ದೇಶಕ ಸಾಮರ್ಥ್ಯ ಪರೀಕ್ಷಿಸಿಕೊಳ್ಳಲು ತನ್ನೊಂದಿಗೆ ಮಲಗುವಂತೆ ಕೇಳಿದ್ದ – ಕರಾಳ ನೆನಪು ಬಿಚ್ಚಿಟ್ಟ ಫ್ರೆಂಚ್‌ ನಟಿ

ಹುಣಸೂರಿನಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಂದು, ಕೆಲ ದಿನಗಳ ಹಿಂದೆಯಷ್ಟೇ ಕೇಸ್ ಖುಲಾಸೆಯಾಗಿ ಜೈಲಿನಿಂದ ಬಿಡುಗಡೆಯಾಗಿದ್ದ.

ಇದೀಗ ಚಂದು ಕೊಲೆಯಾಗಿದ್ದು, ಪಡುವಾರಳ್ಳಿಯ ದೇವು ಕೊಲೆಗೆ ಪ್ರತೀಕಾರ ತೀರಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಒಂಟಿಕೊಪ್ಪಲಿನಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Share This Article