ಸೋದರ ಮಧು ಬಂಗಾರಪ್ಪ ಪರ ಪ್ರಚಾರಕ್ಕಿಳಿದ ಗೀತಾ ಶಿವರಾಜ್‍ಕುಮಾರ್

Public TV
0 Min Read

ಶಿವಮೊಗ್ಗ: ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಶಿವಮೊಗ್ಗ ಪ್ರವಾಸ ಆರಂಭಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೌಟುಂಬಿಕ ಕಾರಣಗಳಿಂದಾಗಿ ಕೆಲ ದಿನ ಸಕ್ರಿಯ ರಾಜಕಾರಣದಿಂದ ದೂರ ಇದ್ದೆ. ಈಗ ಪುನಃ ಸಂಪೂರ್ಣವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದೇನೆ ಎಂದು ಗೀತಾ ಶಿವರಾಜ್‍ಕುಮಾರ್ ಹೇಳಿದರು.

ಸಹೋದರ ಮಧು ಬಂಗಾರಪ್ಪ ಪರ ಸೊರಬದಲ್ಲಿ ಪ್ರಚಾರ ನಡೆಸಲಿರುವ ಗೀತಾ ಶಿವರಾಜ್‍ಕುಮಾರ್, ನಂತರ ತೀರ್ಥಹಳ್ಳಿ ಹಾಗೂ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಹಾಗೂ ಚಿಕ್ಕಮಗಳೂರು, ಕಾರವಾರ ಜಿಲ್ಲೆಗಳಲ್ಲೂ ಚುನಾವಣಾ ಪ್ರಚಾರ ನಡೆಸುವುದಾಗಿ ಘೋಷಿಸಿದರು.

Share This Article
Leave a Comment

Leave a Reply

Your email address will not be published. Required fields are marked *