ಮಹಿಳಾ ಮೀಸಲಾತಿಗೆ ಲೋಕಸಭೆಯಲ್ಲಿ ಸೋಲಾಗಿದ್ದಕ್ಕೆ ವಿಪಕ್ಷಗಳ ವಿರುದ್ಧ ಮಹಾರಾಷ್ಟ್ರ (Maharashtra) ಬಿಜೆಪಿ (BJP) ಪ್ರತಿಭಟನೆ ಆಯೋಜಿಸಿತ್ತು. ಶಾಲೆಯಿಂದ ತನ್ನ ಮಗುವನ್ನು ಕರೆತರಲು ತೆರಳುತ್ತಿದ್ದ ಮಹಿಳೆಯೊಬ್ಬರು ಈ ಟ್ರಾಫಿಕ್ ಜಾಮ್ನಲ್ಲಿ ಗಂಟೆಗಟ್ಟಲೆ ಸಿಲುಕಿಕೊಂಡಿದ್ದರು. ಟ್ರಾಫಿಕ್ನಿಂದ ಬೇಸತ್ತ ಮಹಿಳೆ, ನೇರವಾಗಿ ವಾಹನದಿಂದ ಕೆಳಗಿಳಿದು ಪ್ರತಿಭಟನಾಕಾರರ ಮಧ್ಯೆ ನುಗ್ಗಿದ್ದಾರೆ. ಇದನ್ನೂ ಓದಿ: ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ – 1,000 ಕೋಟಿ ಮೌಲ್ಯದ ವಸ್ತುಗಳು ಜಪ್ತಿ


ರಸ್ತೆ ಮಧ್ಯೆಯೇ ಮಹಾರಾಷ್ಟ್ರದ ಸಚಿವ ಗಿರೀಶ್ ಮಹಾಜನ್ (Girish Mahajan) ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಇಲ್ಲಿಂದ ಜಾಗ ಖಾಲಿ ಮಾಡಿ, ನಿಮ್ಮಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಕಿಡಿಕಾರಿದ್ದಾರೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆದ ಬಳಿಕ ಸಚಿವ ಗಿರೀಶ್ ಮಹಾಜನ್ ಕ್ಷಮೆ ಕೋರಿದ್ದಾರೆ. ನಮ್ಮಿಂದ ಸಾರ್ವಜನಿಕರಿಗೆ ಅಡಚಣೆ ಆಗಿದ್ದು ನಿಜ. ಆದರೆ ಆ ಮಹಿಳೆಯ ಪದಬಳಕೆ ಸರಿ ಇರಲಿಲ್ಲ. ಎಷ್ಟೇ ಸಮಾಧಾನಪಡಿಸಲು ಯತ್ನಿಸಿದರು ಅವರು ಕೋಪಗೊಂಡಿದ್ದರು ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆ ರೋಷಾವೇಶಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ


