MSP ಕಾನೂನು ಜಾರಿಗೆ ತನ್ನಿ ಇಲ್ಲದಿದ್ದರೆ ಇನ್ನೊಂದು ಬೃಹತ್ ಪ್ರತಿಭಟನೆ ಎದುರಿಸಿ: ಸರ್ಕಾರಕ್ಕೆ ಟಿಕಾಯತ್ ಎಚ್ಚರಿಕೆ

Public TV
1 Min Read

ನವದೆಹಲಿ: ರೈತರಿಗೆ ಕನಿಷ್ಠ ಬೆಂಬಲ ಬೆಲೆ (MSP) ಖಾತ್ರಿಪಡಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಇಲ್ಲದಿದ್ದಲ್ಲಿ ನಾಲ್ಕು ಲಕ್ಷ ಟ್ರ್ಯಾಕ್ಟರ್‌ ಗಳನ್ನೊಳಗೊಂಡ ಮತ್ತೊಂದು ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಗಣರಾಜ್ಯೋತ್ಸವ ದಿನದಂದು ಎದುರಿಸಬೇಕುತ್ತದೆ ಎಂದು ಮೋದಿ ಸರ್ಕಾರಕ್ಕೆ ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.


ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಮಹಾಪಂಚಾಯತ್‍ನ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಸರ್ಕಾರ ಮೂರು ಕೃಷಿ ಕಾಯ್ದೆಯನ್ನು ಹಿಂಪಡೆದಿದೆ. ಆದರೆ ಈ ಬಿಲ್ ಸಂಸತ್‍ನಲ್ಲಿ ಪಾಸ್ ಆದ ಬಳಿಕ ನಮ್ಮ ಇತರ 6 ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಬೇಕು. ಆದರೆ ಸರ್ಕಾರ ಮಾತ್ರ ನಮ್ಮ ಚರ್ಚೆಯಿಂದ ಓಡಿಹೋಗುತ್ತಿದೆ. ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ- ರೈತ ಮುಖಂಡರಿಗೆ ಲುಕ್‍ಔಟ್ ನೋಟಿಸ್ ಜಾರಿ

PM MODI

ಮೋದಿ ಈ ಹಿಂದೆ ಗುಜರಾತ್‍ನ ಮುಖ್ಯಮಂತ್ರಿಯಾಗಿದ್ದಾಗ ಎಂಎಸ್‍ಪಿ ಕಾನೂನನ್ನು ಬೆಂಬಲಿಸುತ್ತಿದ್ದರು ಆದರೆ ಇದೀಗ ಮಾತ್ರ ಮೋದಿ ಈ ಬಗ್ಗೆ ಯಾವುದೇ ನಿರ್ಣಯಕೈಗೊಂಡಿಲ್ಲ. ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಮತ್ತೊಮ್ಮೆ ಜನವರಿ. 26 ರಂದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದೇವೆ. 4 ಲಕ್ಷ  ಟ್ರ್ಯಾಕ್ಟರ್‌ಗಳು ಹಾಗೂ ರೈತರು ಈಗಾಗಲೇ ರೆಡಿಯಾಗಿದ್ದಾರೆ ಗುಡುಗಿದ್ದಾರೆ. ಇದನ್ನೂ ಓದಿ: ಉಪಚುನಾವಣೆಯಲ್ಲಿ ಹಿನ್ನಡೆ, ಪಂಚರಾಜ್ಯಗಳ ಚುನಾವಣೆಯ ಮೇಲೆ ಕಣ್ಣು – ಕೃಷಿ ಕಾಯ್ದೆ ವಾಪಸ್‌!

ಕಳೆದ ವರ್ಷ 2021 ಜನವರಿ 26 ರಂದು ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿ ಘರ್ಷಣೆಗೆ ಕಾರಣವಾಗಿತ್ತು. ರೈತರು ಕೆಂಪುಕೋಟೆಗೆ ನುಗ್ಗಿ ಕಿಸಾನ್ ಮತ್ತು ಸಿಖ್ ಧ್ವಜ ಹಾರಿಸಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಬಳಿಕ ಪೊಲೀಸರು ಲಾಠಿಚಾರ್ಚ್ ಮಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *