ಕಾಶಿ ವಿಶ್ವನಾಥ ಧಾಮದ ಕಾರ್ಮಿಕರಿಗೆ ಮೋದಿಯಿಂದ ಉಡುಗೊರೆ

Public TV
1 Min Read

ಲಕ್ನೋ: ಕಾಶಿ ವಿಶ್ವನಾಥ ಧಾಮದಲ್ಲಿ ಕೆಲಸಮಾಡುವ ಕಾರ್ಮಿಕರು ಕೊರೆಯುವ ಚಳಿಯಲ್ಲಿಯೂ ಬರಿಗಾಲಿನಲ್ಲಿ ಇರುವುದನ್ನು ತಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ 100 ಜೊತೆ ಸೆಣಬಿನ ಪಾದಕ್ಷೆಗಳನ್ನು ಕಳುಹಿಸಿದ್ದಾರೆ.

ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಗೆ ವಾರಣಾಸಿಗೆ ಭೇಟಿ ನೀಡಿದ ಮೋದಿ ದೇವಾಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಲ್ಲಿ ಹೆಚ್ಚಿನವರು ಬರಿಗಾಲಿನಲ್ಲಿ ಇರುತ್ತಾರೆ ಎಂಬುದನ್ನು ತಿಳಿದುಕೊಂಡಿದ್ದರು. ಹೀಗಾಗಿ ಅವರಿಗಾಗಿ 100 ಜೊತೆ ಪಾದರಕ್ಷೆಗಳನ್ನು ಕಳುಹಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – 3 ನಿವೃತ್ತ ನ್ಯಾಯಾಧೀಶರ ಸಮಿತಿಯಿಂದ ತನಿಖೆ

ದೇವಸ್ಥಾನದ ಆವಣದಲ್ಲಿ ಚರ್ಮ ಅಥವಾ ರಬ್ಬರ್‌ನಿಂದ ತಯಾರಿಸಿದ ಪಾದರಕ್ಷೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಈ ಕ್ರಮವನ್ನು ದೇವಸ್ಥಾನದ ಅರ್ಚಕರು, ಭದ್ರತಾ ಸಿಬ್ಬಂದಿ, ನೈರ್ಮಲ್ಯ ಕಾರ್ಯಕರ್ತರು ಹಾಗೆಯೇ ಭಕ್ತರು ಚಾಚು ತಪ್ಪದೇ ಪಾಲಿಸುತ್ತಾರೆ. ಹೀಗಾಗಿ ಪ್ರಧಾನಿ ಸೆಣಬಿನಿಂದ ತಯಾರಿಸಿದ ಪಾದರಕ್ಷೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಮೋದಿ, ಯೋಗಿ ಫೋಟೋಗಳೊಂದಿಗೆ ಉಚಿತ ಆಹಾರ ಪ್ಯಾಕೆಟ್‍ಗಳನ್ನು ವಿತರಿಸುವಂತಿಲ್ಲ

ಕಾಶಿ ವಿಶ್ವನಾಥ ಕಾರಿಡರ್ ಉದ್ಘಾಟನೆಯ ಸಮಯದಲ್ಲಿ ಪ್ರಧಾನಿ ಮೋದಿ ಕಾರ್ಮಿಕರು ಜೊತೆ ಗುಂಪು ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಅಷ್ಟೇ ಅಲ್ಲದೇ ಅವರ ಜೊತೆ ಭೋಜನ ವಿದಿದ್ದರು.

Share This Article
Leave a Comment

Leave a Reply

Your email address will not be published. Required fields are marked *