ಬೆಂಗಳೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿದೆ.
ಸುಪ್ರಿಯಾ ಆತ್ಮಹತ್ಯೆಗೆ ಶರಣಾದ ಯುವತಿ. ಸುಪ್ರಿಯಾ ಕಳೆದ ಒಂದು ವರ್ಷದಿಂದ ಶರತ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಮದುವೆ ಮಾಡಿಕೋ ಎಂದು ಸುಪ್ರಿಯಾ ಶರತ್ಗೆ ಕೇಳಿಕೊಂಡಿದ್ದಾರೆ. ಆದರೆ ಶರತ್ ಸುಪ್ರಿಯಾಳನ್ನು ಮದುವೆಯಾಗಲು ನಿರಾಕರಿಸಿದ್ದಾನೆ.
ಶರತ್ ಮಂಗಳವಾರ ಸುಪ್ರಿಯಾಗೆ ಫೋನ್ ಮಾಡಿ ಬೇರೆ ಯುವತಿಯನ್ನ ಮದುವೆಯಾಗುವುದಾಗಿ ತಿಳಿಸಿದ್ದ. ಪ್ರಿಯಕರನ ಈ ಮಾತಿನಿಂದ ಬೇಸತ್ತ, ಸುಪ್ರಿಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸದ್ಯ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.