ವೈದ್ಯರ ಎಡವಟ್ಟಿನಿಂದ ಬಾಲಕಿ ಸಾವು

Public TV
1 Min Read

ಬೆಳಗಾವಿ: ಜಿಲ್ಲಾ ಆಸ್ಪತ್ರೆಯ ವೈದ್ಯರ ಹಾಗೂ ಬಿಮ್ಸ್ ಅಧಿಕಾರಿಗಳ ನಿರ್ಲಕ್ಷ್ಯದಿಂದ 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಬಿಮ್ಸ್ ಡೈರೆಕ್ಟರ್ ಕಿರಣ್‍ಕುಮಾರ್ ಪಾಟೀಲ್ ಆರೋಪಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಕಾಕ ತಾಲೂಕಿನ ಡೋರಗಲ್ಲಿಯ ಶ್ರದ್ಧಾ ಗಂಟಲು ನೋವಿನಿಂದ ಬಳಲುತ್ತಿದ್ದಳು. ಡಿಸೆಂಬರ್ 21 ರಂದು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಡಿಸೆಂಬರ್ 23 ರಂದು ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿದರು.

ಗಂಟಲಿನ ಟಾನ್ಸಿಲ್ಸ್ ಶಸ್ತ್ರಚಿಕಿತ್ಸೆಗೆ ಡಿಸೆಂಬರ್ 21ರಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಗಂಟಲು, ಮೂಗು ವಿಭಾಗದ ವೈದ್ಯರು ಶಸ್ತ್ರಚಿಕಿತ್ಸೆ ಮಾಡಲು ಮುಂದಾಗುತ್ತಾರೆ. ಆದರೆ ಅರವಳಿಕೆ ಮದ್ದು ನೀಡಿದ ತಕ್ಷಣ ಬಾಲಕಿ ಮೃತಪಟ್ಟಿದ್ದಾಳೆ ಎಂದು ಉಡಾಫೆ ಉತ್ತರ ಹೇಳುತ್ತಾರೆ. ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕು. ಪೋಷಕರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *