ತುಮಕೂರು: ಸ್ಟೇಟಸ್ಗೆ ರೀಲ್ಸ್ (Reels) ಅಪ್ಲೋಡ್ ಮಾಡಿದ ವಿಚಾರವಾಗಿ ಪ್ರೇಮಿಗಳ ನಡುವೆ ಜಗಳ ಉಂಟಾಗಿ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.
ಚೈತನ್ಯ (22) ನೇಣಿಗೆ ಶರಣಾದ ಯುವತಿ. ಸೋಮವಾರ ರಾತ್ರಿ 10 ಘಂಟೆ ಸುಮಾರಿಗೆ ಘಟನೆ ನಡೆದಿದೆ. ತುಮಕೂರು ಗ್ರಾಮಾಂತರದ ಹೊಸಹಳ್ಳಿಯಲ್ಲಿ ತಾಯಿ ಜೊತೆ ವಾಸವಿದ್ದ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತಿದ್ದಳು. ಅಲ್ಲದೇ ಮೇಕಪ್ ಆರ್ಟಿಸ್ಟ್ ಕೂಡ ಆಗಿದ್ದಳು. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಪಕ್ಕದ ಊರಿನ ವಿಜಯ್ ಹಾಗೂ ಚೈತನ್ಯ ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇದನ್ನೂ ಓದಿ: ಸರ್ಕಾರ, ನಮ್ಮ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್
ಸೋಮವಾರ ಚೈತನ್ಯ ರೀಲ್ಸ್ವೊಂದನ್ನು ಸ್ಟೇಟಸ್ನಲ್ಲಿ ಅಪ್ಲೋಡ್ ಮಾಡಿದ್ದಳು. ಇದೇ ವಿಚಾರವಾಗಿ ಪ್ರಶ್ನಿಸಲು ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದ. ಆಗ ಚೈತನ್ಯ ತಾಯಿ ಸೌಭಾಗ್ಯಮ್ಮ ರೂಂನಲ್ಲಿ ಇದ್ದರು. ತಾಯಿ ಇದ್ದ ರೂಂ ಬಾಗಿಲಿನ ಚಿಲಕ ಹಾಕಿ ಕಿಟಕಿ ಬಳಿ ಇಬ್ಬರು ಜಗಳವಾಡಿದ್ದಾರೆ. ಆ ಬಳಿಕ ಚೈತನ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ವಿಚಾರವನ್ನು ವಿಜಯ್ ಚೈತನ್ಯ ಸಂಬಂಧಿಗೆ ಕರೆ ಮಾಡಿ ತಿಳಿಸಿದ್ದಾನೆ. ಸಂಬಂಧಿ ಬಂದು ನೋಡಿದಾಗ ಚೈತನ್ಯ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಜಮೀರ್ ಹೃದಯವಂತ ಸಚಿವ, ದಿಲ್ದಾರ್.. ಶ್ಹಾನ್ದಾರ್ ಮನುಷ್ಯ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಬ್ಯಾಟಿಂಗ್
ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ ಕಾರಣ ಎಂದು ದೂರು ದಾಖಲಾಗಿದ್ದು, ಪ್ರಿಯಕರ ವಿಜಯ್ನನ್ನು ತುಮಕೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸ್ಥಗಿತವಾಗಿರುವ ಪರಿಸ್ಥಿತಿ ಕಾಣುತ್ತಿದ್ದೇವೆ: ಶೋಭಾ ಕರಂದ್ಲಾಜೆ ಆರೋಪ