ಸೀಬೆ ಹಣ್ಣು ಕೀಳಲು ಹೋಗಿ ಪ್ರಾಣ ಕಳೆದುಕೊಂಡ ಸಹೋದರಿಯರು

Public TV
0 Min Read

ಚಾಮರಾಜನಗರ: ಸೀಬೆ ಹಣ್ಣು ಕೀಳಲು ಹೋಗಿ ಇಬ್ಬರು ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ.

ಪೂಜಾ (10) ಪುಣ್ಯ (15) ಮೃತ ಬಾಲಕಿಯರು. ಈ ಇಬ್ಬರು ದುರ್ದೈವಿಗಳು ರೇಚಣ್ಣ ಎಂಬವರ ಪುತ್ರಿಯರಾಗಿದ್ದಾರೆ. ಇಂದು ಬೆಳಗ್ಗೆ ತಿಂಡಿ ತಿಂದು ಬಳಿಕ ಸೀಬೆ ಹಣ್ಣು ಕೀಳಲೆಂದು ಜಮೀನಿಗೆ ತೆರಳಿದ್ದಾರೆ. ಅಲ್ಲದೆ ಸೀಬೆ ಮರ ಹತ್ತಿ ಹಣ್ಣು ಕೀಳುತ್ತಿರುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ.

 

ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *