ಅತ್ತೆ, ಸೊಸೆ ಇಬ್ಬರಿಗೂ ಎರಡು ಸಾವಿರ ಹಣ ನೀಡಿ: ರೇಣುಕಾಚಾರ್ಯ

Public TV
1 Min Read

ದಾವಣಗೆರೆ: ಅತ್ತೆ ಹಾಗೂ ಸೊಸೆ ಇಬ್ಬರಿಗೂ ಎರಡು ಸಾವಿರ ಹಣ ನೀಡಿ. ಇದು ಮನೆಯಲ್ಲಿ ಜಗಳ ತಂದಿಡಲು ಮಾಡಿದ ಯೋಜನೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (M.P.Renukacharya) ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದಾರೆ.

ದಿನ ಬೆಳಗಾದರೆ ರೇಣುಕಾಚಾರ್ಯ ಅವರು ಹಳ್ಳಿ ಹಳ್ಳಿ ಸುತ್ತಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಜನ ಜಾಗೃತಿಗೆ ಮುಂದಾಗಿದ್ದಾರೆ. ಅದೇ ರೀತಿ ಜಿಲ್ಲೆಯ ಹೊನ್ನಾಳಿ (Honnali) ತಾಲೂಕಿನ ಕುರವ ಹಳೆದಿಬ್ಬ ಗ್ರಾಮಗಳಿಗೆ ತೆರಳಿ ಮಹಿಳೆಯರಿಗೆ ಗ್ಯಾರಂಟಿ ಯೋಜನೆ (Guarantee Scheme) ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಇದನ್ನೂ ಓದಿ: ಟಿಕೆಟ್.. ಟಿಕೆಟ್.. ಟಿಕೆಟ್.. – ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!

ಈ ಸಂದರ್ಭ ಮಾತನಾಡಿದ ಅವರು, ಅತ್ತೆ ಹಾಗೂ ಸೊಸೆ ಇಬ್ಬರಿಗೂ ಎರಡು ಸಾವಿರ ಹಣ ನೀಡಿ. ಕಾಂಗ್ರೆಸ್‌ನವರು ದಿನಕ್ಕೊಂದು ನಿಬಂಧನೆ ಹಾಕುತ್ತಿದ್ದಾರೆ. ಈ ಹಿಂದೆ ಎಲ್ಲರಿಗೂ ಸೌಲಭ್ಯ ಎಂದರು. ಈಗ ಆದಾಯ ತೆರಿಗೆ ಕಟ್ಟುವವರಿಗೆ ಇಲ್ಲಾ ಎನ್ನುತ್ತಿದ್ದಾರೆ. ಇದು ಮನೆ ಮನೆಯಲ್ಲಿ ಜಗಳ ತಂದಿಡುವ ಕೆಲಸ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು – ತಪ್ಪಾಯ್ತು ಬಿಟ್ಬಿಡಿ ಅಣ್ಣಾ ಎಂದು ಸಾರ್ವಜನಿಕರಲ್ಲಿ ಕ್ಷಮೆ

Share This Article