ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದು, ಬೇರೆಯವರ ಮೇಲೆ ಆರೋಪ ಮಾಡಲ್ಲ: ಪ್ರತಾಪ್ ಗೌಡ

Public TV
1 Min Read

ರಾಯಚೂರು: ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿಕೆ ಬಗ್ಗೆ ಗೊತ್ತಿಲ್ಲ. ನಾನು ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದೇನೆ. ಬೇರೆಯವರ ಮೇಲೆ ಆರೋಪ ಮಾಡಲ್ಲ ಎಂದು ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ ಅವರು, ರಾಜೀನಾಮೆ ಅಂಗಿಕಾರವಾದ ಮೇಲೆಯೇ ಮುಂಬೈ ಬಿಡುತ್ತೇವೆ. ಶಿವರಾಮ್ ಹೆಬ್ಬಾರ್ ಹೇಳಿಕೆ ಅವರ ವೈಯಕ್ತಿಕ ವಿಚಾರ. ನಾನು ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟು ಬಂದಿದ್ದೇನೆ. ಬೇರೆ ಯಾರದ್ದೋ ಹೆಸರು ತಂದು ಆರೋಪ ಮಾಡಲ್ಲ, ಅದು ಸರಿಯಲ್ಲ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಗೆ ಹೋಗುತ್ತೇನೋ ಇಲ್ಲವೋ ಎನ್ನುವ ವಿಚಾರ ಮುಂದೆ ತಿಳಿಸುತ್ತೇನೆ. ರಾಜೀನಾಮೆ ಅಂಗೀಕಾರವಾದ ಮೇಲೆ ಮುಂದಿನ ನಿರ್ಧಾರ ಮಾಡುತ್ತೇನೆ. ಸದ್ಯ ಮುಂಬೈ ಬಿಟ್ಟು ಕ್ಷೇತ್ರಕ್ಕೆ ಬರುವುದಿಲ್ಲ. ಇನ್ನೆರಡು ದಿನದಲ್ಲಿ ರಾಜೀನಾಮೆ ಅಂಗೀಕಾರವಾದರೆ ಬೆಂಗಳೂರಿಗೆ ಬರುತ್ತೇವೆ ಎಂದು ತಿಳಿಸಿದರು.

ಹೆಬ್ಬಾರ್ ನಿನ್ನೆ ನಮ್ಮ ಜೊತೆಯಲ್ಲೇ ಇದ್ದರು. ಆದರೆ ಸದ್ಯ ಅವರು ತಮ್ಮ ಸ್ವಕ್ಷೇತ್ರಕ್ಕೆ ಹೋಗಿದ್ದಾರೆ. ಅವರ ಹೇಳಿಕೆ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಪ್ರತಾಪ್ ಗೌಡ ಪಾಟೀಲ್ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *