ಮಾಲೇಕಲ್ ತಿರುಪತಿಯಲ್ಲಿ ದುಷ್ಕರ್ಮಿಗಳಿಂದ ವಿಗ್ರಹ ಧ್ವಂಸ

Public TV
1 Min Read

ಹಾಸನ: ಅರಸೀಕೆರೆ ಮಾಲೇಕಲ್ ತಿರುಪತಿಯಲ್ಲಿ ದುಷ್ಕರ್ಮಿಗಳು ವಿಗ್ರಹಗಳನ್ನು ಧ್ವಂಸ ಮಾಡಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆಯ ಮಾಲೇಕಲ್ ತಿರುಪತಿಯಲ್ಲಿ ದೇವಾಲಯದ ಕಲ್ಯಾಣಿ ಬಳಿ ವಿಗ್ರಹಗಳು ನಿರ್ಮಾಣವಾಗುತ್ತಿತ್ತು. ಈ ಮ್ಯೂಸಿಯಂ ಒಳಗಿದ್ದ 13 ವಿಗ್ರಹಗಳನ್ನು ಕಿಡಿಗೇಡಿಗಳನ್ನು ಧ್ವಂಸಗೊಳಿಸಿದ್ದಾರೆ. ಈ ಕೃತ್ಯವನ್ನು ಕಲ್ಯಾಣಿಯಲ್ಲಿ ಈಜಲು ಬಂದ ದುಷ್ಕರ್ಮಿಗಳಿಂದ ನಡೆದಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ನಾವೆಲ್ಲಾ ಪೋಸ್ಟ್ ಮ್ಯಾನ್ ಕೆಲಸ ಮಾಡ್ತೇವೆ- ಬಿಜೆಪಿ ಕುರಿತು ನಟ ಜಗ್ಗೇಶ್ ಹೇಳಿದ್ದಿಷ್ಟು

ವಿಗ್ರಹವನ್ನು ಯಾಕೆ ಮತ್ತು ಯಾರು ಧ್ವಂಸಗೊಳಿಸಿದರು ಎಂಬ ಕುರಿತು ಯಾವುದೇ ನಿಖರ ಮಾಹಿತಿ ತಿಳಿದುಬಂದಿಲ್ಲ. ಸೋಮವಾರ ಈ ಘಟನೆ ನಡೆದಿದ್ದು, ಈಗಾಗಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಕುರಿತು ದೇವಸ್ಥಾನ ಮುಜರಾಯಿ ಇಲಾಖೆಯೂ ಪರಿಶೀಲನೆ ನಡೆಸುತ್ತಿದೆ. ಶ್ರೀನಿವಾಸ ಕಲ್ಯಾಣಕ್ಕೆ ಸಂಬಂಧಿಸಿದಂತೆ ದಾನಿಗಳು ವಿಗ್ರಹ ಮಾಡಿಸುತ್ತಿದ್ದರು. ಇದನ್ನೂ ಓದಿ: ರಾಜಭವನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣ – ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ

Share This Article
Leave a Comment

Leave a Reply

Your email address will not be published. Required fields are marked *