ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

Public TV
1 Min Read

ಸಾಂದರ್ಭಿಕ ಚಿತ್ರ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳಿದ್ದು, ಅರಮನೆಯಲ್ಲಿ ತಯಾರಿ ಕೆಲಸಗಳು ಜೋರಾಗಿ ನಡೆಯುತ್ತಿವೆ. ಇಂದು ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭವಾಗಿದೆ.

ನಾಡಹಬ್ಬ ದಸರಾಗೆ ಮೈಸೂರು ಸಜ್ಜಾಗುತ್ತಿದ್ದು, ದಸರಾದ ಪ್ರಮುಖ ಖಾಸಗಿ ಕಾರ್ಯಕ್ರಮದ ನಿಮಿತ್ತ ಅರಮನೆಯಲ್ಲಿ ದಸರಾ ತಯಾರಿ ಜೋರಾಗಿ ನಡೆಯುತ್ತಿದೆ. ಅಲ್ಲದೇ ದಸರಾ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಸಿಂಹಾಸದಲ್ಲಿ ಕುಳಿತು ಖಾಸಗಿ ದರ್ಬಾರ್ ನಡೆಸುತ್ತಾರೆ. ದಸರಾ ಸಂದರ್ಭದಲ್ಲಿ ಮಾತ್ರ ಸಿಂಹಾಸನ ಜೋಡಣೆ ಮಾಡಲಾಗುತ್ತದೆ.

ಸಿಂಹಾಸನ ಜೋಡಣೆ ಕಾರ್ಯವನ್ನು ತಲೆತಲಾಂತರದಿಂದ ತಾಲೂಕಿನ ಗೆಜ್ಜಗಳ್ಳಿ ಗ್ರಾಮಸ್ಥರು ನಡೆಸುತ್ತಾ ಬಂದಿದ್ದಾರೆ. ಸಿಂಹಾಸ ಜೋಡಣೆ, ವಿಸರ್ಜನೆ ಸಂದರ್ಭದಲ್ಲಿ ಗೆಜ್ಜಗಳ್ಳಿಯ ಗ್ರಾಮಸ್ಥರನ್ನು ಅರಮನೆಗೆ ಕರೆಸಲಾಗುತ್ತದೆ.

ಸಿಂಹಾಸನದಲ್ಲಿ ಸಿಂಹದ ಮುಖ ಇರುವ ಭಾಗವನ್ನು ದರ್ಬಾರ್ ದಿನ ಜೋಡಿಸಲಾಗುತ್ತದೆ. ಇನ್ನು ವರ್ಷಪೂರ್ತಿ ಸಿಂಹಾಸನ ಬಿಡಿಭಾಗಗಳನ್ನು ರಹಸ್ಯ ಸ್ಥಳದಲ್ಲಿ ಇರಿಸಲಾಗಿರುತ್ತದೆ. ಸಿಂಹಾಸನ ಜೋಡಣೆ ಕೆಲಸ ಇರುವುದರಿಂದ ಇಂದು ಅರಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *