ರೈತಾಪಿ ವರ್ಗಕ್ಕೆ ಸಂತಸ ವಾರ್ತೆ: ಅವಧಿಗೂ ಮುನ್ನ ಮುಂಗಾರು ಎಂಟ್ರಿ

Public TV
0 Min Read

ಬೆಂಗಳೂರು: ರಣಭೀಕರ ಬರದಿಂದ ತತ್ತರಿಸಿ ಹೋಗಿರುವ ರೈತ ಸಮುದಾಯಕ್ಕೆ ಸಂತಸದ ಸುದ್ದಿ. ಈ ಬಾರಿಯ ಮುಂಗಾರು ನಿಗದಿತ ಅವಧಿಗೂ ಮುನ್ನವೇ ರಾಜ್ಯ ಪ್ರವೇಶಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಾರುತಗಳು ಸೋಮವಾರದಂದು ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪ ಪ್ರವೇಶಿಸಲಿದೆ. ಸಾಮಾನ್ಯವಾಗಿ ನೈಋತ್ಯ ಮಾರುತಗಳು ಜೂನ್ 1ರಂದು ಕೇರಳ ಪ್ರವೇಶಿಸಬೇಕು. ಆದ್ರೆ ಈ ಬಾರಿ ಮೇ 25ಕ್ಕೇ ಮೊದಲ ಮುಂಗಾರಿನ ಸಿಂಚನವಾಗಲಿದೆ.

ಇದೇ ತಿಂಗಳು ಮೇ 29ರಂದು ಮುಂಗಾರು ಮಾರುತಗಳು ರಾಜ್ಯಕ್ಕೆ ಎಂಟ್ರಿಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ.

 

Share This Article
Leave a Comment

Leave a Reply

Your email address will not be published. Required fields are marked *