ಮಲಗಿದ್ದವರ ಮೇಲೆ ಟೆಂಪೋ ಹರಿಸಿದ ಚಾಲಕ- ಓರ್ವ ಸಾವು

Public TV
1 Min Read

ಕೊಪ್ಪಳ: ಚಾಲಕನೊಬ್ಬ ಮಲಗಿದ್ದವರ ಮೇಲೆ ಗೂಡ್ಸ್‌ ವಾಹನ ಹರಿಸಿದ ಘಟನೆ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ನಂದಿ ಸರ್ಕಲ್ ಬಳಿ ನಡೆದಿದೆ.

ಘಟನೆಯಲ್ಲಿ ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿದೆ. ಮೃತನನ್ನು ತಿಪ್ಪಣ್ಣ (75) ಎಂದು ಗುರುತಿಸಲಾಗಿದೆ. ಬಳ್ಳಾರಿಯ ಮಲ್ಲಮ್ಮ, ಕುಕನೂರಿನ ಹನುಮವ್ವ, ಕಾರಟಗಿಯ ತುಕಾರಂ ಎಂಬುವರಿಗೆ ಗಾಯಗಳಾಗಿವೆ. ಬಳ್ಳಾರಿ ಜಿಲ್ಲೆ ಯರಂಗಳಿಯ ಚಾಲಕ ಶ್ರೀನಿವಾಸ ವಾಹನ ಹರಿಸಿದ ಚಾಲಕನಾಗಿದ್ದಾನೆ. ಇದನ್ನೂ ಓದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ – ಉತ್ತರ ಕನ್ನಡ ಜಿಲ್ಲೆ ಜನರ ಹೋರಾಟಕ್ಕೆ ಕುಮಾರಸ್ವಾಮಿ ಬೆಂಬಲ

crime

ಮಲಗಿದವರ ಮೇಲೆ ವಾಹನ ಹರಿಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗೂಡ್ಸ್‌ ವಾಹನ ಚಾಲಕ ಶ್ರೀನಿವಾಸ್ ವಿರುದ್ಧ ಗಾಯಾಳುಗಳು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *