ಗೌರಿ ಹತ್ಯೆ ಪ್ರಕರಣ-ಮತ್ತೊಬ್ಬ ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

Public TV
1 Min Read

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮತ್ತೊಬ್ಬ ಕಾರ್ಯಕರ್ತನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಆರೋಪಿ ಭರತ್ ನನ್ನು ಬಂಧಿಸಿ, ಮತ್ತಿಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಬಂಧಿತರು ಪರಶುರಾಮ್ ವಾಗ್ಮೋರೆಗೆ ಬೆಳಗಾವಿಯಲ್ಲಿ ಆಶ್ರಯ ಕೊಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪರಶುರಾಮ್ ವಾಗ್ಮೋರೆ ನೀಡಿದ್ದ ಮಾಹಿತಿ ಆಧಾರದ ಮೇಲೆ ಭರತ್ ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿರುವ ಎಸ್‍ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜನರನ್ನು ಬಂಧಿಸಿದ್ದು, ಅದರಲ್ಲಿ ಈಗ ಕೊನೆಯ ವ್ಯಕ್ತಿಯೇ ಭರತ್ ಆಗಿದ್ದಾರೆ.

ಯಾರು ಈ ಪರಶುರಾಮ್ ವಾಗ್ಮೋರೆ?
ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ನಿವಾಸಿ ಪರಶುರಾಮ್ ವಾಗ್ಮೋರೆ. ವಯಸ್ಸು 26. ಕಟ್ಟಾ ಹಿಂದೂವಾದಿಯಾಗಿದ್ದು, ಶ್ರೀರಾಮಸೇನೆ, ಹಿಂದೂ ಜಾಗೃತಿ ವೇದಿಕೆಯಲ್ಲೂ ಗುರುತಿಸಿಕೊಂಡಿದ್ದ. ಈ ಹಿಂದೆ ಸಿಂಧಗಿ ತಹಶೀಲ್ದಾರ್ ಕಚೇರಿ ಬಳಿ ಪಾಕ್ ಧ್ವಜ ಹಾರಿಸಿದ ಪ್ರಕರಣದಲ್ಲಿ ಪರಶುರಾಮ್ ಹೆಸರು ಕೇಳಿ ಬಂದಿತ್ತು. ಪರಶುರಾಮ್ ಒಬ್ಬ ಶಾರ್ಪ್ ಶೂಟರ್ ಆಗಿದ್ದು, ಅಮೋಲ್ ಕಾಳೆ, ಮನೋಹರ್ ಯವಡೆಗೆ ಎಂಬವರಿಗೆ ತರಬೇತಿ ನೀಡಿದ್ದ ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಸಂಬಂಧಿಕರ ಅಂಗಡಿಯಲ್ಲಿ ಪರಶುರಾಮ್ ಕೆಲಸ ಮಾಡಿಕೊಂಡಿದ್ದ.

Share This Article
Leave a Comment

Leave a Reply

Your email address will not be published. Required fields are marked *