ನಾಡಗೀತೆಗೆ ಕಾಲಮಿತಿ ನಿಗದಿ ಮಾಡಿದ ಸರ್ಕಾರ

Public TV
2 Min Read

ಬೆಂಗಳೂರು: ನಾಡಗೀತೆ ಕುರಿತ ಗೊಂದಲಕ್ಕೆ ಕೊನೆಗೂ ಸರ್ಕಾರ (Karnataka Government) ತೆರೆ ಎಳೆದಿದೆ. ರಾಷ್ಟ್ರಕವಿ ಕುವೆಂಪು (Kuvempu) ವಿರಚಿತ ನಾಡಿನ ಹೆಮ್ಮೆಯ ನಾಡಗೀತೆಗೆ ಕಾಲಮಿತಿಯನ್ನು ಸರ್ಕಾರ ನಿಗದಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬಸವರಾಜ್‌ ಬೊಮ್ಮಾಯಿ (Basavaraj Bommai), ರಾಷ್ಟ್ರಕವಿ ಕುವೆಂಪು ವಿರಚಿತ ನಾಡಿನ ಹೆಮ್ಮೆಯ ನಾಡಗೀತೆ “ಜಯಭಾರತ ಜನನಿಯ ತನುಜಾತೆ” (Jaya Bharata Jananiya Tanujate) ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿದ್ದೇವೆ. ಸಂಗೀತ ವಿದೂಷಿ ಎಸ್ ಆರ್. ಲೀಲಾವತಿ ಅಧ್ಯಕ್ಷತೆ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ, ಇನ್ನು ಮುಂದೆ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್ ನಲ್ಲಿ ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇತ್ತ ಸಚಿವ ಸುನೀಲ್ ಕುಮಾರ್ (Sunil Kumar) ಟ್ವೀಟ್ ಮಾಡಿ, ಕುವೆಂಪು ವಿರಚಿತ ನಾಡಗೀತೆ “ಜಯಭಾರತ ಜನನಿಯ ತನುಜಾತೆ” ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ.

ನಾಡಗೀತೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ಪ್ರಸ್ತಾಪಕ್ಕೆ ಸಮ್ಮತಿ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಅಭಿನಂದನೆಗಳು. ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ ಇನ್ನು ಅಧಿಕೃತವಾಗಿ ಹಾಡಲಾಗುತ್ತದೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬಲವಂತದ ಮತಾಂತರ ತಡೆಗೆ ನಿರ್ದೇಶನ ಕೋರಿ ಅರ್ಜಿ – ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

ವಿವಾದವೇನಿತ್ತು..?: 2005ರಿಂದಲೂ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವ ವಿಚಾರ ನೆನೆಗುದಿಗೆ ಬಿದ್ದಿತ್ತು. ಕೆಲವೊಂದು ಕಾರ್ಯಕ್ರಮಗಳಲ್ಲಿ 7-8 ನಿಮಿಷಗಳ ಕಾಲ ಹಾಡಲಾಗುತ್ತಿತ್ತು. ಹೀಗಾಗಿ ದಾಟಿ ಹಾಗೂ ಕಾಲಮಿತಿಯ ಬಗ್ಗೆ ಸ್ಪಷ್ಟತೆ ತರಬೇಕೆಂದು ಒತ್ತಾಯ ಸರ್ಕಾರದ ಮುಂದಿತ್ತು.

ಇದೀಗ ಸುನೀಲ್ ಕುಮಾರ್ ಅವರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ ಕೆಲವೇ ದಿನಗಳಲ್ಲಿ ನಾಡಗೀತೆಗೆ ದಾಟಿ ಹಾಗೂ ಕಾಲಮಿತಿ ನಿಗದಿ ಮಾಡುವಂತೆ ಹಿರಿಯ ಸಂಗೀತ ವಿದೂಷಿ ಎಸ್.ಆರ್ ಲೀಲಾವತಿ ಅಧ್ಯಕ್ಷತೆಯಲ್ಲಿ 18 ಜನ ಇರುವ ಸಮಿತಿಯೊಂದನ್ನು ರಚಿಸಲಾಗಿತ್ತು. ಈ ಸಮಿತಿ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕೆಂಬ ನೀಡಿದ್ದ ಶಿಫಾರು ಇದೀಗ ಅಧಿಕೃತಗೊಂಡಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *