ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ – ಕ್ಯಾರೇ ಎನ್ನದ ಇಲಾಖೆ ಅಧಿಕಾರಿಗಳು

Public TV
1 Min Read

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆಯನ್ನ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಮಾಡುತ್ತಿದ್ದಾರೆ.

ಬೆಳಗ್ಗೆಯೇ ದೂರದ ಊರುಗಳಿಂದ ಬೆಂಗಳೂರಿಗೆ ಬಂದ ಸಾವಿರಾರು ಬಿಸಿಯೂಟ ಕಾರ್ಯಕರ್ತೆಯರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ರ‍್ಯಾಲಿ ಮೂಲಕ ಆಗಮಿಸಿ, ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ.

ಕೆಲ ಕಾರ್ಯಕರ್ತೆಯರು ಪುಟ್ಟ ಕಂದಮ್ಮಗಳನ್ನು ಮಡಿಲಲ್ಲಿ ಇಟ್ಟುಕೊಂಡೇ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕರ್ತೆಯರು ಬೆಳಗ್ಗೆಯಿಂದ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಇಲ್ಲಿವರೆಗೆ ಬಂದಿಲ್ಲ. ಮಂತ್ರಿಗಳಾಗಲಿ, ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಪ್ರತಿಭಟನಾ ಸ್ಥಳಕ್ಕೆ ಬಂದು ಕಾರ್ಯಕರ್ತೆಯರ ಅಳಲು ಕೇಳಿಲ್ಲ.

ಹೀಗಾಗಿ ತಮ್ಮ ಪ್ರತಿಭಟನೆಗೆ ಕ್ಯಾರೇ ಅನ್ನದೆ, ಯಾವುದೇ ಭರವಸೆ ನೀಡದ ಸರ್ಕಾರದ ಧೋರಣೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ಸ್ಥಳದಿಂದ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *