ಉಪಚುನಾವಣೆಯ 5 ಕ್ಷೇತ್ರಗಳಲ್ಲಿ ನ.3ರಂದು ಸರ್ಕಾರಿ ರಜೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 5 ಕ್ಷೇತ್ರಗಳ ಉಪಚುನಾವಣೆಯ ಮತದಾನದ ದಿನವಾದ ನವೆಂಬರ್ 3ರಂದು ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಂಡ್ಯ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ, ರಾಮನಗರ ವಿಧಾನಸಭಾ ಮತಕ್ಷೇತ್ರಗಳಲ್ಲಿ ಇದೇ ಶನಿವಾರ ಮತದಾನ ನಡೆಯಲಿದೆ. ಹೀಗಾಗಿ ಈ ಐದೂ ಕ್ಷೇತ್ರಗಳ ವ್ಯಾಪ್ತಿಯ ಶಾಲಾ-ಕಾಲೇಜು, ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಸರ್ಕಾರಿ ನೌಕರರಿಗೆ ರಜೆ ನೀಡಲಾಗಿದೆ.

ಉಪಚುನಾವಣಾ ಕ್ಷೇತ್ರಗಳ ವ್ಯಾಪ್ತಿಯ ಹೊರಗೆ ಕೆಲಸ ನಿರ್ವಹಿಸಿಕೊಂಡು, ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ ನೌಕರರಿಗೂ ರಜೆ ನೀಡಲಾಗಿದೆ. ಆದರೆ ತುರ್ತು ಸೇವೆಗಳ ಮೇಲೆ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಸಚಿವಾಲಯ ತಿಳಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *