ದೇವರಾಜ ಅರಸು ಉತ್ಸವವನ್ನು ಸರ್ಕಾರ ಕೈಬಿಟ್ಟಿದೆ: ಕೋಟಾ ಶ್ರೀನಿವಾಸ ಪೂಜಾರಿ

Public TV
1 Min Read

ಉಡುಪಿ: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು (D. Devaraj Urs) ಜನ್ಮದಿನ ಆಗಸ್ಟ್ 20ರಂದು ನಡೆಯಲಿದೆ. ಬಿಜೆಪಿ ಸರ್ಕಾರ ಇದ್ದಾಗ ಮೂರು ದಿನಗಳ ಕಾಲ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ದೇವರಾಜ ಅರಸು ಉತ್ಸವ ಆರಂಭ ಮಾಡಿತ್ತು. ಸಿದ್ದರಾಮಯ್ಯ (Siddaramaiah) ಸರ್ಕಾರ ಈ ಪರಿಪಾಠ ಕೈಬಿಟ್ಟಿದೆ. ಯಾವುದೇ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬದುಕು ಬರಹ ಸಾಮಾಜಿಕ ನ್ಯಾಯ ವಿಚಾರವನ್ನು ಮುಂದಿನ ಜನಾಂಗಕ್ಕೆ ತಿಳಿಸುವ ಕೆಲಸ ಬಿಜೆಪಿ ಸರ್ಕಾರ ಮಾಡಿತ್ತು. ಹಾಸ್ಟೆಲ್ ಮಕ್ಕಳಿಂದ ಪ್ರತಿಭಾ ಪ್ರದರ್ಶನ ಮಾಡಿಸಿದ್ದೆವು, ವಿಚಾರ ಸಂಕೀರ್ಣವನ್ನು ಮಾಡಿದ್ದೆವು. ರಾಜ್ಯ ಮಟ್ಟದ ಪ್ರಶಸ್ತಿ ನೀಡಿದ್ದೆವು, ಅರಸು ಆದರ್ಶ ಪಾಲಿಸಿದವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿದ್ದೆವು. ಸಿದ್ದರಾಮಯ್ಯ ಹಿಂದುಳಿದವರ ಕಾಳಜಿ ಬಗ್ಗೆ ಮಾತನಾಡುತ್ತಾರೆ. ಈ ಸರ್ಕಾರ ಕೂಡ ಮೂರು ದಿನಗಳ ಉತ್ಸವ ಮಾಡಬೇಕೆಂದು ಸಿದ್ದರಾಮಯ್ಯಗೆ ಪತ್ರ ಬರೆದಿದ್ದೆ. ದುರಾದೃಷ್ಟವಶಾತ್ ಮುಖ್ಯಮಂತ್ರಿ ಕಚೇರಿಯಿಂದ ಹಿಂಬರಹ ಬಿಟ್ಟರೆ ಬೇರೇನೂ ಪ್ರತಿಕ್ರಿಯೆ ಬಂದಿಲ್ಲ. ಹಿಂದಿನ ಸರ್ಕಾರ ಮಾಡಿದ ಅರಸು ಉತ್ಸವ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಮೂರು ದಿನಗಳ ಆಚರಣೆಗೆ ಯಾವ ದೊಡ್ಡ ಮೊತ್ತದ ಅವಶ್ಯಕತೆ ಇಲ್ಲ. ಆಯಾ ಜಿಲ್ಲೆಗಳಲ್ಲಿರುವ ಅನುದಾನ ಬಳಸಿಕೊಂಡು ಮಾಡಬಹುದು. ಯಾವುದೇ ವಿಶೇಷ ಅನುದಾನದ ಸಮಸ್ಯೆ ಆಗುವುದಿಲ್ಲ. ಆದರೆ ಇಚ್ಛಾಶಕ್ತಿ ಬೇಕು ಅಷ್ಟೇ. ಸಿದ್ದರಾಮಯ್ಯನವರೇ ಇಚ್ಛಾಶಕ್ತಿ ಪ್ರದರ್ಶಿಸಿ ಎಂದು ಕೋಟಾ ಕಿವಿ ಹಿಂಡಿದ್ದಾರೆ.

ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ಆಗಿದ್ದ ದಿವಂಗತ ದೇವರಾಜ ಅರಸು ಅವರ ಸಮಸ್ಮರಣೆಯ ನೆನಪಿನ ಕಾರ್ಯಕ್ರಮವನ್ನು ಕಾಂಗ್ರೆಸ್ ಸರ್ಕಾರ ಮುಂದುವರೆಸುತ್ತಾ? ಒಂದು ಸರ್ಕಾರಿ ಕಾರ್ಯಕ್ರಮದ ರೀತಿ ಆಚರಿಸುತ್ತಾ ಎಂಬ ಪ್ರಶ್ನೆ ಇದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್