ತುಂಬು ಗರ್ಭಿಣಿಯನ್ನ ವಾಪಸ್ ಕಳುಹಿಸಿದ ಸರ್ಕಾರಿ ಆಸ್ಪತ್ರೆ ವೈದ್ಯರು

Public TV
0 Min Read

ಕೋಲಾರ: ಹೆರಿಗೆಗೆಂದು ದಾಖಲಾಗಿದ್ದ ತುಂಬು ಗರ್ಭಿಣಿಯನ್ನ ವೈದ್ಯರು ವಾಪಸ್ ಕಳುಹಿಸಿದ ಘಟನೆ ಜಿಲ್ಲೆಯ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಮಾಲೂರು ತಾಲೂಕಿನ ಚಿಕ್ಕ ಇಗ್ಗಲೂರು ನಿವಾಸಿಯಾಗಿರುವ ಪ್ರಿಯಾಂಕ (23) ಎಂಬವರು ಹೆರಿಗೆಗೆಂದು ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಮಾಡಲು ಆಕ್ಸಿಜನ್ ಇಲ್ಲ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ಮಾಲೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಈ ಬಗ್ಗೆ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರನ್ನು ಕೇಳಿದಾಗ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುತ್ತಿದೆ. ಆಕ್ಸಿಜನ್ ಇಲ್ಲ ಎಂದು ಹೊರಗೆ ಕಳಿಸಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *