ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ: ಸಚಿವ ವೆಂಕಟೇಶ್

Public TV
1 Min Read

ಚಾಮರಾಜನಗರ: ಆಕ್ಸಿಜನ್ ದುರಂತ (Chamarajanagar Oxygen Tragedy) ಸಂತ್ರಸ್ತರಿಗೆ ಅತಿ ಶೀಘ್ರದಲ್ಲೇ ಖಾಯಂ ನೇಮಕಾತಿ ಮಾಡುತ್ತೇವೆ ಎಂದು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ವೆಂಕಟೇಶ್ (Venkatesh) ತಿಳಿಸಿದ್ದಾರೆ.

ಸರ್ಕಾರದ ಪರಿಹಾರ ತಾರತಮ್ಯ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೆ ಆಕ್ಸಿಜನ್ ದುರಂತ ನಡೆದಾಗ ಬಿಜೆಪಿ ಸರ್ಕಾರವಿತ್ತು, ಅವರು ಸರಿಯಾದ ರೀತಿ ಪರಿಹಾರ ಕೊಟ್ಟಿಲ್ಲ ಎಂದರು. ಈಗ ಕಾಲ್ತುಳಿತ ಪ್ರಕರಣದಲ್ಲಿ ಸತ್ತವರಿಗೆ ಕೊಟ್ಟ ರೀತಿಯಲ್ಲಿ ಅವರಿಗೆ ಪರಿಹಾರ ಕೊಡಲು ಆಗಲ್ಲ. ಅವರಿಗೆ ಸರ್ಕಾರಿ ಉದ್ಯೋಗ ಕೊಡುವ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲಿ ಅವರಿಗೆ ಸರ್ಕಾರಿ ಉದ್ಯೋಗ ಸಿಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮೂವರು ಅಧಿಕಾರಿಗಳನ್ನು ವಜಾಗೊಳಿಸಿ, ಇಲ್ದೆ ಇದ್ರೆ ಲೈಸನ್ಸ್‌ ರದ್ದು ಆಗುತ್ತೆ: ಏರ್‌ ಇಂಡಿಯಾಗೆ ಡಿಜಿಸಿಎ ಎಚ್ಚರಿಕೆ

ಮನೆ ಮಂಜೂರು ಮಾಡಲು ಲಂಚ ನೀಡಬೇಕು ಎಂಬ ಆಡಿಯೋ ವೈರಲ್ ವಿಚಾರದ ಕುರಿತು ಪ್ರತಿಕ್ರಿಯಿಸಿ, ಬಿಆರ್ ಪಾಟೀಲ್ ಆಪಾದನೆ ಎಷ್ಟರ ಮಟ್ಟಿಗೆ ನಿಜ ಎಂಬ ಬಗ್ಗೆ ತನಿಖೆಯಾಗಬೇಕು. ಈಗಾಗಲೇ ವಸತಿ ಸಚಿವರು ನಮ್ಮಲ್ಲಿ ಆ ರೀತಿ ನಡೆದಿಲ್ಲ ಎಂದು ಸಿಎಂ ಭೇಟಿ ಮಾಡಿ ಸ್ಪಷ್ಟನೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಪಲ್ಟಿ ಹೊಡೆದು ಪಂತ್‌ ಶತಕ ಸಂಭ್ರಮ – ಧೋನಿ ರೆಕಾರ್ಡ್‌ ಬ್ರೇಕ್‌

ತನಿಖೆ ಮಾಡಿಸಿ ಎಂದು ವಸತಿ ಸಚಿವರು ಸಿಎಂಗೆ ಹೇಳಿದ್ದಾರೆ. ಆ ರೀತಿ ಲಂಚ ನಡೆದಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಹೇಳಿದ್ದಾರೆ. ಈಗ ಮನೆಗಳನ್ನೇ ಕೊಡ್ತಿಲ್ಲ, ಮನೆಗಳನ್ನು ಎಲ್ಲಿಯೂ ಮಂಜೂರು ಮಾಡುತ್ತಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮನೆ ಮಂಜೂರು ಮಾಡ್ತಿಲ್ಲ, ಹಳೇ ಸರ್ಕಾರದ ಬಾಕಿ ತೀರಿಸ್ತಾ ಇದ್ದೇವೆ ಎಂದರು. ಇನ್ನೂ ಅಕ್ರಮ ಗಣಿಗಾರಿಕೆ ಬಗ್ಗೆ ಸಚಿವ ಹೆಚ್.ಕೆ ಪಾಟೀಲ್ ಸಿಎಂಗೆ ಪತ್ರ ಬರೆದಿರುವ ವಿಚಾರದ ಕುರಿತು ನನಗೆ ಗೊತ್ತಿಲ್ಲ ಎಂದು ಜಾರಿಕೊಂಡರು. ಇದನ್ನೂ ಓದಿ: ಯೋಗ ದಿನದಲ್ಲಿ 51 ಪುಷ್‌-ಅಪ್‌ ಸಲೀಸಾಗಿ ಪೂರ್ಣಗೊಳಿಸಿದ ತ.ನಾಡು ರಾಜ್ಯಪಾಲ ರವಿ

Share This Article