ಕಚೇರಿ ಅವಧಿಯಲ್ಲೇ ಗಡದ್ದಾಗಿ ನಿದ್ದೆಗೆ ಜಾರಿದ ನೀರಾವರಿ ಅಧಿಕಾರಿ!

Public TV
1 Min Read

ಬಳ್ಳಾರಿ: ಬೇಸಿಗೆ ಆರಂಭದಲ್ಲೇ ಬಿಸಿಲಿನ ಪ್ರಭಾವ ಹೆಚ್ಚಾಗಿದ್ದು, ಪರಿಣಾಮ ಜನರು ಹನಿ ನೀರಿಗೆ ಪರಿತಪಿಸುತ್ತಿದ್ದಾರೆ. ಆದರೆ ನೀರು ಸರಬರಾಜು ಹೊಣೆ ಹೊತ್ತ ಅಧಿಕಾರಿ ಮಾತ್ರ ಕಚೇರಿಯಲ್ಲಿ ನಿದ್ದಗೆ ಜಾರಿದ್ದ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ ನಗರಸಭೆ ನೀರು ಸರಬರಾಜು ಇಲಾಖೆಯ ಎಇಇ ಮಹೇಶ್ವರಪ್ಪ ಅವರು ಕೆಲಸದ ಅವಧಿಯಲ್ಲೇ ನಿದ್ದೆಗೆ ಜಾರಿದ್ದಾರೆ. ನಗರದ ಎಲ್ಲಾ ವಾರ್ಡ್ ಗಳಿಗೆ ದಿನದ 24 ಗಂಟೆ ನೀರು ಸರಬರಾಜು ಮಾಡುವ ಹೊಣೆಯನ್ನು ಮಹೇಶ್ವರಪ್ಪ ಹೊತ್ತಿದ್ದಾರೆ.

ಕೆಲಸ ಅವಧಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದ್ದ ಅಧಿಕಾರಿ ಕಚೇರಿಯ ಫ್ಯಾನ್ ಕೆಳಗೆ ನಿದ್ದೆ ಜಾರಿದ್ದನ್ನು ಕಂಡ ಸ್ಥಳೀಯರು ಅಧಿಕಾರಿಯ ನಿರ್ಲಕ್ಷ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಧಿಕಾರಿ ನಿದ್ದೆ ಮಾಡುತ್ತಿರುವ ಫೋಟೋ ತೆಗೆದು ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *