ರಾಯಚೂರಿನಲ್ಲಿ ಸರ್ಕಾರಿ ಕಚೇರಿಗಳ ಸಿಬ್ಬಂದಿ ನಾಪತ್ತೆ – ಭ್ರಷ್ಟಾಚಾರದ ಹೊಗೆ?

Public TV
1 Min Read

ರಾಯಚೂರು: ಜಿಲ್ಲೆಯಲ್ಲಿ ಒಬ್ಬರಾದ ಮೇಲೆ ಒಬ್ಬರು ಸರ್ಕಾರಿ ಸಿಬ್ಬಂದಿ ನಾಪತ್ತೆಯಾಗುತ್ತಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿದೆ. ರಾಯಚೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿ ನಾಪತ್ತೆ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಸರ್ಕಾರಿ ಕಚೇರಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿಯ ಸಿಬ್ಬಂದಿ ಶಿವಪ್ಪ ಆಗಸ್ಟ್ 24 ರಿಂದ ನಾಪತ್ತೆಯಾಗಿದ್ದಾರೆ. ಈಗಾಗಲೇ ಸಹಾಯಕ ಆಯುಕ್ತರ ಕಚೇರಿಯ ಸಿಬ್ಬಂದಿ ಪ್ರಕಾಶಬಾಬು ನಾಪತ್ತೆಯಾಗಿ ಐದು ದಿನಗಳಾಗಿವೆ. ನಾಪತ್ತೆಯಾಗಿರುವ ಸಿಬ್ಬಂದಿ ಶಿವಪ್ಪ ಪತ್ನಿಯಿಂದ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನೂ ಪ್ರಕಾಶಬಾಬು ನಾಪತ್ತೆಯ ಪ್ರಕರಣ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಾಗಿದ್ದು ಈಗಾಗಲೇ ತನಿಖೆ ಚುರುಕುಗೊಂಡಿದೆ. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

ಸರ್ಕಾರಿ ಕಚೇರಿಯ ಸಿಬ್ಬಂದಿಗಳ ನಾಪತ್ತೆ ತೀವ್ರ ಕುತೂಹಲ ಮೂಡಿಸಿದೆ. ಹಲವಾರು ಅನುಮಾನಗಳಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಾಪತ್ತೆ ಪ್ರಕರಣಗಳ ಹಿಂದೆ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರದ ವಾಸನೆ ಬಡಿಯುತ್ತಿದೆ. ಪ್ರಕರಣಗಳನ್ನ ಭೇದಿಸಲು ಪೊಲೀಸ್ ಇಲಾಖೆ ಈಗಾಗಲೇ ತಂಡಗಳನ್ನ ರಚಿಸಿದ್ದು, ತನಿಖೆ ಚುರುಕುಕೊಂಡಿದೆ. ಇದನ್ನೂ ಓದಿ: ಸಚಿವೆಯಾದರೂ ಹೆಣ್ಣು ಹೆಣ್ಣೇ ಅಲ್ವಾ? ಅವರ ಮನೆಯಲ್ಲೇ ಹಾಗಾದ್ರೆ?: ಹೆಚ್.ಎಂ.ರೇವಣ್ಣ

Share This Article
Leave a Comment

Leave a Reply

Your email address will not be published. Required fields are marked *