ನಿಂತಿದ್ದ ಲಾರಿಗೆ ಡಿವೈಎಸ್‍ಪಿ ವಾಹನ ಡಿಕ್ಕಿ

Public TV
1 Min Read

-ಡಿವೈಎಸ್‍ಪಿ ವೆಂಕಟೇಶ್ ಉಗಿಬಂಡಿ ಸೇರಿ ಇಬ್ಬರಿಗೆ ತೀವ್ರ ಒಳಪೆಟ್ಟು

ಯಾದಗಿರಿ: ಜಿಲ್ಲೆಯ ಸುರಪುರ ಉಪ ವಿಭಾಗದ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿಯವರ ಸರ್ಕಾರಿ ವಾಹನ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅದೃಷ್ಟವಶತ್ ಡಿವೈಎಸ್‍ಪಿ ವೆಂಕಟೇಶ್ ಉಗಿಬಂಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ:ಡಿಸ್ಕಸ್ ಥ್ರೋ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ

yadagiri accident

ಆದರೆ ಘಟನೆ ವೇಳೆ ಡಿವೈಎಸ್‍ಪಿ ಸೇರಿ ಉಪ ಕಾನ್ಸ್‌ಟೇಬಲ್ ಉಮಾಕಾಂತ್ ಹಾಗೂ ವಾಹನ ಚಾಲಕ ಚಂದಪ್ಪಗೌಡಗೆ ತೀವ್ರ ಒಳಪೆಟ್ಟುಗಳಾಗಿವೆ. ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ:ಕುರಿ ಸಂತೆಯಿಂದ ಟ್ರಾಫಿಕ್ ಜಾಮ್ – ಅಂಬುಲೆನ್ಸ್ ಗೂ ಜಾಗ ಬಿಡದ ಜನ

yadagiri accident

ಭಾರೀ ಮಳೆ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೇ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿವೈಎಸ್‍ಪಿ ವಾಹನ ಡಿಕ್ಕಿ ಹೊಡೆದಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ:ಜೇಬಿನಲ್ಲೇ ಸದಾ ಕಾಂಡೋಮ್ ಇಟ್ಕೊಂಡು ತಿರುಗಾಡುತ್ತಿದ್ದ ಕಾಮುಕ

Share This Article
Leave a Comment

Leave a Reply

Your email address will not be published. Required fields are marked *