ಭ್ರಷ್ಟಾಚಾರಿ, ಗೂಂಡಾಗಳನ್ನು ಸರ್ಕಾರ ರಕ್ಷಿಸಲ್ಲ: ಕೆ.ಎಸ್.ಈಶ್ವರಪ್ಪ

Public TV
1 Min Read

ಧಾರವಾಡ/ಹುಬ್ಬಳ್ಳಿ: ಭ್ರಷ್ಟಾಚಾರಿ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ಸರ್ಕಾರದ ರಕ್ಷಣೆ ಸಿಗುತ್ತದೆ ಎಂಬ ನಂಬಿಕೆ ದೇಶದಲ್ಲಿತ್ತು. ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಅಂತಹವರಿಗೆ ರಕ್ಷಣೆ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯೋಗೀಶ್ ಗೌಡ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಕುರಿತು ತನಿಖೆ ನಡೆಸಲಾಗುತ್ತಿದೆ. ತಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಈ ಪ್ರಕರಣವನ್ನು ಸಿಬಿಐಗೆ ನೀಡಲಾಗಿದೆ. ಗೂಂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಭಾನುವಾರ ಹಾಗೂ ಸೋಮವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಅಧಿಕಾರಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇಂದು ಬೆಳಗಾವಿ, ಚಿಕ್ಕೋಡಿ ವಿಭಾಗದದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.

ನೆರೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಕಾರಗಳ ತಂಡ ಕಳುಹಿಸಿ ಸಮೀಕ್ಷೆ ಮಾಡಿದೆ. ಆದಷ್ಟು ಬೇಗ ಕೇಂದ್ರ ಸರ್ಕಾರ ನೇರೆ ಪರಿಹಾರದ ಹಣವನ್ನು ಬಿಡುಗಡೆ ಮಾಡುತ್ತದೆ ಎಂಬ ನಂಬಿಕೆ ಇದೆ. ನೆರೆ ಹಾವಳಿಗೆ ಸಂಬಂಧಿಸಿದಂತೆ ಈಗ ತಾತ್ಕಾಲಿಕವಾಗಿ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಶೇ.99 ಭಾಗ ವಿತರಣೆಯಾಗಿದೆ. ಈಗ ತಾತ್ಕಾಲಿಕ ಸಮಸ್ಯೆ ನಿವಾರಣೆ ಮಾಡಲಾಗಿದೆ. ಮುಂದೆ ನಿರಾಶ್ರಿತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವದು ಎಂದರು.

Share This Article
Leave a Comment

Leave a Reply

Your email address will not be published. Required fields are marked *