ಬಸವಣ್ಣ ಐಕ್ಯ ಸ್ಥಳ ಕೂಡಲಸಂಗಮಕ್ಕೆ ರಾಜ್ಯಪಾಲರ ಭೇಟಿ

Public TV
1 Min Read

ಬಾಗಲಕೋಟೆ: ಧಾರ್ಮಿಕ ಕ್ಷೇತ್ರ ಹಾಗೂ ಅಣ್ಣ ಬಸವಣ್ಣನ ಐಕ್ಯ ಸ್ಥಳವಾಗಿರುವ ಕೂಡಲಸಂಗಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ, ಸಂಗಮನಾಥನ ದರ್ಶನ ಪಡೆದುಕೊಂಡರು.

ತ್ರಿವೇಣಿ ಸಂಗಮ ಕೂಡಲಸಂಗಮಕ್ಕೆ ಇದೇ ಪ್ರಥಮ ಬಾರಿಗೆ ಭೇಟಿ ನೀಡಿದ ಅವರು ದೇವಾಲಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಐಕ್ಯಮಂಟಪದ ದರ್ಶನ ಪಡೆದ ಅವರು, ಬಸವಣ್ಣ ಹಾಗೂ ಧಾರ್ಮಿಕ ಕೇಂದ್ರದ ಬಗ್ಗೆ ಮಾಹಿತಿ ಪಡೆದುಕೊಂಡ ಬಳಿಕ ಬಸವಣ್ಣನವರ ಐಕ್ಯ ಮಂಟಪದ ದರ್ಶನ ಪಡೆದುಕೊಂಡರು. ಇದನ್ನೂ ಓದಿ: ಸುನೀಲ್ ಸಂಕ್, ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ 

ಬಸವಣ್ಣನವರ ಐಕ್ಯ ಸ್ಥಳವನ್ನು ನೀರಿನಲ್ಲಿ ಕಟ್ಟಿರುವ ಬಗ್ಗೆ ಮಾಹಿತಿ ಪಡೆದುಕೊಂಡು ಆಶ್ಚರ್ಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಸವ ಧರ್ಮ ಪೀಠದ ಮಾದೇಶ್ವರ ಸ್ವಾಮೀಜಿ ಅವರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *