ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ, ವಿತರಣಾ ಕಾಲುವೆಗಳ ಜಾಲದ ಆಧುನೀಕರಣಕ್ಕೆ ಅನುಮೋದನೆ: ಕಾರಜೋಳ

Govinda Karajola

ಬೆಂಗಳೂರು/ಬಾಗಲಕೋಟೆ: ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಮತ್ತು ವಿತರಣಾ ಕಾಲುವೆಗಳ ಜಾಲದ ಆಧುನೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

alamatti dam

ಆಧುನೀಕರಣ ಕಾಮಗಾರಿಯ ವಿವರವಾದ ಯೋಜನಾ ವರದಿಗೆ 75.41 ಕೋಟಿ ರೂ. ಅಂದಾಜು ಮೊತ್ತದ ಕಾಮಗಾರಿಗೆ ಡಿ.20ರಂದೇ ಆಡಳಿತಾತ್ಮಕ ಅನುಮೋದನೆ ನೀಡಿದೆ. ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ 0.00 ರಿಂದ 68.24 ಕಿ.ಮೀ. ವರೆಗಿನ (ಹಾಳಾಗಿರುವ ಆಯ್ದ ಭಾಗಗಳ) ಹಾಗೂ ವಿತರಣಾ ಕಾಲುವೆಗಳ ಸಂರಚನೆ ಒಳಗೊಂಡ ಆಧುನೀಕರಣ ಕಾಮಗಾರಿಯ 112.48 ಕೋಟಿ ರೂ. ಅಂದಾಜು ಮೊತ್ತದ (2016-17ನೇ ಸಾಲಿನ ದರಪಟ್ಟಿ ಅನ್ವಯ) ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ಕೂಡ ಸಿಕ್ಕಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‍ನದ್ದು ದೇಶದಲ್ಲಿ ಹಾರದ ಬಾವುಟ: ಆರ್. ಅಶೋಕ್ ವ್ಯಂಗ್ಯ

ಇದಕ್ಕೆ ಸಂಬಂಧಿಸಿದಂತೆ ಆಧುನೀಕರಣದ ಪ್ಯಾಕೇಜ್ ಕಾಮಗಾರಿಯನ್ನು ಟೆಂಡರ್ ಆಧಾರದ ಮೇಲೆ ಗುತ್ತಿಗೆ ವಹಿಸಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಅದಾದ ನಂತರ 0.00 ರಿಂದ 68.24 ಕಿ.ಮೀ. ವರೆಗಿನ (ಆಯ್ದ ಭಾಗಗಳ) ವಿತರಣಾ ಕಾಲುವೆಗಳ ಆಧುನೀಕರಣದ ಕಾಮಗಾರಿಗಳನ್ನು 3 ಪ್ಯಾಕೇಜ್‌ಗಳಲ್ಲಿ ಗುತ್ತಿಗೆ ವಹಿಸಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

bgk govinda karajola

ಮುದ್ದೇಬಿಹಾಳ ಮತಕ್ಷೇತ್ರದ ಜನಪ್ರತಿನಿಧಿಗಳು ಆಲಮಟ್ಟಿ ಎಡದಂಡೆ ಕಾಲುವೆಯ ಸುಮಾರು 30 ಕಿ.ಮೀ. ಆಧುನೀಕರಣ ಕಾಮಗಾರಿಯನ್ನು ತೆಗೆದುಕೊಂಡಿದ್ದು, ಇನ್ನುಳಿದ 56 ಕಿ.ಮೀ. ಕಾಲುವೆಯ ಆಧುನೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮನವಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟಕ್ಕೆ ಈ ಕಾಲುವೆ ಜಾಲದ ಆಧುನಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಕೋರಲಾಗಿತ್ತು. ಆಲಮಟ್ಟಿ ಎಡದಂಡೆ ಕಾಲುವೆಯ ಜಾಲದ ಆಧುನೀಕರಣ ಕಾಮಗಾರಿಯ ಪ್ರಸ್ತಾವನೆಯಿಂದ ಕಾಲುವೆ ಜಾಲದಲ್ಲಿ ಸಮರ್ಪಕ ನೀರು ನಿಯಂತ್ರಣ ಹಾಗೂ ನಿರ್ವಹಣೆ ಸಾಧ್ಯವಾಗುವುದರಿಂದ ನಿಗದಿತ ಅಚ್ಚುಕಟ್ಟು ಕ್ಷೇತ್ರಕ್ಕೆ ಮತ್ತು ಕಾಲುವೆ ಜಾಲದ ಕೊನೆ ಅಂಚಿನ ಭಾಗಕ್ಕೆ ಸಮರ್ಪಕವಾಗಿ ನೀರು ಪೂರೈಸಲು ಸಾಧ್ಯವಾಗುತ್ತದೆ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೈಜಾಕ್ ಮಾಡೋದಕ್ಕೆ ಮೇಕೆದಾಟು ಯೋಜನೆಯನ್ನು ಹೆಚ್‌ಡಿಕೆ ಮಾಡಿದ್ರಾ: ಸಿದ್ದರಾಮಯ್ಯ ತಿರುಗೇಟು

Comments

Leave a Reply

Your email address will not be published. Required fields are marked *