ಮೀಸಲಾತಿ ವಿಚಾರದಲ್ಲಿ ಸರ್ಕಾರ ಮೋಸ ಮಾಡುತ್ತಿದೆ: ಡಿ.ಕೆ ಶಿವಕುಮಾರ್

Public TV
1 Min Read

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ ಅಂತ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ, ಒಕ್ಕಲಿಗರು, ಪರಿಶಿಷ್ಟರ ಮೀಸಲಾತಿ ವಿಚಾರದಲ್ಲಿ ಸರ್ಕಾರ ಎಲ್ಲರಿಗೂ ಮೋಸ ಮಾಡುತ್ತಿದೆ. ಬಿಜೆಪಿ ಯಾವ ನಿರ್ಧಾರವನ್ನು ಕಾನೂನು ಪ್ರಕಾರ ಮಾಡಿಲ್ಲ ಅಂತ ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್-ಜೆಡಿಎಸ್ ಸಭೆಗಳಲ್ಲಿ ಚಪ್ಪಲಿ ಹಿಡಿದು ಕಿತ್ತಾಟ – ಬಿಜೆಪಿ ಸಭೆಯಲ್ಲಿ ಮಾತ್ರ ಶಿಸ್ತು: ನಳಿನ್ ಕುಮಾರ್ ಕಟೀಲ್

ಬಿಜೆಪಿ (BJP) ಅವರು ಮೀಸಲಾತಿ ನೀಡಬೇಕಾದರೆ ಸಂವಿಧಾನದಲ್ಲಿ ತಿದ್ದುಪಡಿ ತರಬೇಕು. ದೆಹಲಿಯಲ್ಲಿ ತಿದ್ದುಪಡಿ ಮಾಡಿ ಕಳುಹಿಸಬೇಕಿತ್ತು. ಕೇಂದ್ರ ಸಚಿವರು ನಮ್ಮ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದಾರೆ. ಇವರು ಕೇವಲ ಘೋಷಣೆ ಮಾಡಿ ನಾವು ಗೆದ್ದಿದ್ದೇನೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಕೊಡುವ ಎಲ್ಲಾ ಗ್ಯಾರಂಟಿ ಭರವಸೆಗಳನ್ನ ಈಡೇರಿಸುತ್ತೆ – ಡಿಕೆಶಿ

ಬಿಜೆಪಿ ಅವರಿಗೆ ಕಾನೂನು ಗೊತ್ತಿಲ್ಲವೆ? ಈ ವಿಚಾರದಲ್ಲಿ ಮುಖ್ಯಮಂತ್ರಿ ಯಾಕೆ ಘೋಷಣೆ ಮಾಡಲಿಲ್ಲ? ಘೋಷಣೆ ಮಾಡಿದ ನಂತರ 3 ತಿಂಗಳು ಕಳೆದ ಬಳಿಕ ವರದಿ ತರಿಸಿಕೊಂಡು ತೀರ್ಮಾನ ಮಾಡುತ್ತಾರಂತೆ. ಫೆಬ್ರವರಿ ಅಂತ್ಯಕ್ಕೆ ಇವರ ಅಧಿಕಾರ ಬಹುತೇಕ ಅಂತ್ಯವಾಗುತ್ತದೆ. ಅಧಿಕಾರಿಗಳ ಕೈಯಲ್ಲಿ 48 ದಿನಗಳ ಕಾಲ ಅಧಿಕಾರ ಇರುತ್ತದೆ. ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರ (Congress Government) ಬಂದರೆ ಮೀಸಲಾತಿ ಕೊಡ್ತೀರಾ ಎಂಬ ಪ್ರಶ್ನೆಗೆ ಆಗ ನೋಡೋಣ ಅಂತ ಹಾರಿಕೆ ಉತ್ತರ ನೀಡಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *