ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸಲು ಗ್ರಾಮವನ್ನೇ ದತ್ತು ಪಡೆದ್ರು

Public TV
1 Min Read

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಪರಿಶ್ರಮದಿಂದ ಮಾದರಿ ಕಾಲೇಜಾಗಿದೆ. ಜೊತೆಗೆ ಈ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸಲು ಒಂದು ಗ್ರಾಮವನ್ನೇ ದತ್ತು ತೆಗೆದುಕೊಂಡಿದ್ದಾರೆ.

ರಾಯಚೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದೀಗ ಖಾಸಗಿ ಕಾಲೇಜನ್ನೇ ಮೀರಿಸುವಂತೆ ನಿರ್ಮಾಣವಾಗಿದೆ. ಇದಕ್ಕೆಲ್ಲಾ ಕಾರಣ ಪ್ರಾಂಶುಪಾಲ ಪ್ರಾಣೇಶ್ ಕುಲಕರ್ಣಿ ಹಾಗೂ ಅಧ್ಯಾಪಕವೃಂದ. ವಿದ್ಯಾರ್ಥಿಗಳ ಸಮವಸ್ತ್ರದಿಂದ ಹಿಡಿದು ಸಿಸಿ ಕ್ಯಾಮೆರಾ, ವೈಫೈ ಅಳವಡಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಎಲ್ಲವೂ ಇಲ್ಲಿ ಇದೆ. ವಿದ್ಯಾರ್ಥಿಗಳಿಗಾಗಿ ಉಪನ್ಯಾಸಕರು ಆಸಕ್ತಿಯಿಂದ ಓವರ್ ಟೈಮ್ ಕೆಲಸ ಮಾಡ್ತಿದ್ದಾರೆ.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಬೆಳೆಸಲು ರಾಯಚೂರು ತಾಲೂಕಿನ ಗೋನಾಳ ಗ್ರಾಮವನ್ನ ದತ್ತು ತೆಗೆದುಕೊಂಡಿದ್ದಾರೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈಗಾಗಲೇ ಉಪನ್ಯಾಸಕರೇ ತಮ್ಮ ಸ್ವಂತ ಖರ್ಚಿನಲ್ಲಿ ಶೌಚಾಲಯ ನಿರ್ಮಿಸಿ ಕೊಟ್ಟಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ ಗ್ರಾಮೀಣ ಭಾಗದ 80 ಯುವಕರಿಗೆ ಸ್ವಯಂ ಉದ್ಯೋಗ ತರಬೇತಿ ನೀಡುತ್ತಿದ್ದು, 80 ಜನರಿಗೆ ಉಪನ್ಯಾಸಕರೇ ತಮ್ಮ ಸ್ವಂತ ಖರ್ಚಿನಲ್ಲಿ `ಗುರು ಪ್ರಸಾದ’ ಹೆಸರಿನಲ್ಲಿ ಊಟದ ವ್ಯವಸ್ಥೆ ಮಾಡಿದ್ದಾರೆ.

ಪುಸ್ತಕ ಜೋಳಿಗೆ ಕಾರ್ಯಕ್ರಮದ ಮೂಲಕ ಸಾಹಿತಿಗಳು, ಸಾರ್ವಜನಿಕರಿಂದ ಪುಸ್ತಕ ಸಂಗ್ರಹಿಸಿ ಗ್ರಂಥಾಲಯ ತುಂಬಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *